ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 17 ಸೆಪ್ಟಂಬರ್ 2020 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕ ಜೀವನದಲ್ಲಿ ಕೊಂಚ ಅಸಮಾಧಾನಗಳು, ಭಿನ್ನಾಭಿಪ್ರಾಯಗಳು ತೋರಿಬಂದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಸೂಕ್ತ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮ ಹಿತ ಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳಿದ್ದರೂ ನಿಮ್ಮ ಕಾರ್ಯಸಾಧನೆಗೆ ತೊಂದರೆಯಾಗದು. ಹಿರಿಯರ ಪ್ರೀತ್ಯರ್ಥವಾಗಿ ಕೆಲವು ಕೆಲಸ ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಗಮನ ಬೇರೆಡೆ ಸೆಳೆಯುವಂತಹ ಘಟನೆಗಳಾದೀತು. ಮಾನಸಿಕವಾಗಿ ದೃಢವಾಗಿರಬೇಕು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಸುಧಾರಣೆಯಾಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕರ್ಕಟಕ: ವಾರಂತ್ಯದ ವಿನೋದ ಯಾತ್ರೆಗೆ ತಯಾರಿ ನಡೆಸಲಿದ್ದೀರಿ. ನಿಮ್ಮ ನೇರ ಮಾತುಗಳು ಕೆಲವರಿಗೆ ಇಷ್ಟವಾಗದೇ ಇರಬಹುದು. ಆದರೆ ನಿಮಗನಿಸಿದ್ದನ್ನು ಮಾಡುವುದರಿಂದ ಮನಸ್ಸಿಗೂ ನೆಮ್ಮದಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕನ್ಯಾ: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವುದು ಬಿಡಿ. ವಾದ ವಿವಾದಗಳಿಂದ ದೂರವಿದ್ದರೆ ಉತ್ತಮ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ದೇವತಾ ಪ್ರಾರ್ಥನೆ ಮರೆಯದಿರಿ.

ತುಲಾ: ಆಸ್ತಿ ವಿಚಾರವಾಗಿ ದಾಯಾದಿ ಕಲಹಗಳು ತೋರಿಬಂದೀತು. ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಲು ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಕಾರ್ಯನಿಮಿತ್ತ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ವೃಶ್ಚಿಕ: ಪ್ರಬುದ್ಧರಾಗಿ ಯೋಚನೆ, ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಧನು: ನಿಮ್ಮ ಜೀವನ ಶೈಲಿ ಬದಲಾಯಿಸುವುದರಿಂದ ಕೆಲವೊಂದು ಲಾಭಗಳಾಗಲಿವೆ. ಕಷ್ಟದ ಸಮಯದಲ್ಲಿ ತಾಳ್ಮೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಸಂಗಾತಿಯ ಮಾತಿಗೆ ಕಿವಿಗೊಡಿ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ.

ಮಕರ: ಸಾಂಸಾರಿಕ ಸಂಬಂಧಗಳಲ್ಲಿ ಬಿರುಕು ಮೂಡಬಹುದು. ಸಂಗಾತಿಯ ಕಷ್ಟಗಳಿಗೆ ಜತೆಯಾಗಲಿದ್ದೀರಿ. ಕ್ರಿಯಾತ್ಮಕ ಯೋಚಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಉದ್ಯೋಗದಲ್ಲಿ ಸ್ಥಾನಪಲ್ಲಟವಾಗುವ ಸಾಧ‍್ಯತೆಗಳಿವೆ.

ಕುಂಭ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಇಷ್ಟ ದೇವರ ಪ್ರಾರ್ಥನೆಯಿಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಸುಸ್ರೂತ್ರವಾಗಿ ನಡೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಿಂದ ಸಂತಸವಾಗಲಿದೆ.

ಮೀನ: ಸಾಂಸಾರಿಕವಾಗಿ ಕಡಿದುಹೋಗಿದ್ದ ಸಂಬಂಧಗಳು ಮರಳಿ ಬೆಸೆಯಲಿವೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜಾತಕದಲ್ಲಿ ಕುಜ ರಾಹು ಸಂಧಿ ಇದ್ದಾಗ ಈ ವಸ್ತುಗಳನ್ನು ದಾನ ಮಾಡಿ

ಮಹಾಗಣಪತಿ ಮೂಲ ಮಂತ್ರ ಕನ್ನಡದಲ್ಲಿ ಇಲ್ಲಿದೆ ಓದಿ

ಕುಜ ದೋಷವಿದ್ದರೆ ಯಾವ ಬಟ್ಟೆ ಧರಿಸಬೇಕು

ಶತ್ರು ಭಯ ನಾಶಕ್ಕಾಗಿ ಕಾಳಿ ದೇವಿಯ ಈ ಮಂತ್ರವನ್ನು ಪಠಿಸಿ

ಚಂದ್ರಗ್ರಹ ದೋಷವಿದ್ದಾಗ ಯಾವ ಬಣ್ಣದ ಬಟ್ಟೆ ಧರಿಸಬೇಕು

ಮುಂದಿನ ಸುದ್ದಿ
Show comments