Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 18 ಸೆಪ್ಟಂಬರ್ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮೇಲಧಿಕಾರಿಗಳ ಕಿರಿ ಕಿರಿಯಿಂದ ಕೆಲಸದಲ್ಲಿ ಉತ್ಸಾಹ ಕಂದುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ದುಃಖ ಹಂಚಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾಗುವ ಅಂಶಗಳು ಕಂಡುಬರಲಿದೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಮಿಥುನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಯಾವುದೇ ವಿಚಾರವಾದರೂ ಸಂಗಾತಿಯೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಉತ್ತಮ ಅವಕಾಶ ಕಂಡುಬರಲಿದೆ.

ಕರ್ಕಟಕ: ನಿಮ್ಮ ವೈಯಕ್ತಿಕ ಸಂತೋಷಕ್ಕೆ ಯಾವುದೇ ಅಡ್ಡಿಯೂ ಬರದು. ಪ್ರೀತಿ ಪಾತ್ರರೊಂದಿಗೆ ಮನಸ್ಸಿನ ಭಾವನೆ ಹಂಚಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳ ಕಂಡುಬರಲಿದೆ.

ಸಿಂಹ: ಸಾಂಸಾರಿಕ ಜೀವನದಲ್ಲಿ ಹೊಂದಾಣಿಕೆ ಕೊರತೆಯಿಂದ ಭಿನ್ನಾಭಿಪ್ರಾಯಗಳು ಉಂಟಾದೀತು. ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಇತರರ ಗಮನ ಸೆಳೆಯಲಿದೆ. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋದರೆ ನೆಮ್ಮದಿ ಹಾಳಾದೀತು.



ಕನ್ಯಾ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಬಂಧು ಮಿತ್ರರನ್ನು ಬಹಳ ಕಾಲದ ನಂತರ ಭೇಟಿ ಮಾಡಿದ ಸಂತಸ ನಿಮ್ಮದಾಗುವುದು. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧ ಒದಗಿಬರಲಿದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟ ಯೋಗವಿದೆ. ಬಯಸಿದ ವಸ್ತು ಪಡೆಯಲು ಕೆಲವೊಂದನ್ನು ತ್ಯಾಗ ಮಾಡಬೇಕಾಗುತ್ತದೆ.

ವೃಶ್ಚಿಕ: ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆ ಬಗೆಹರಿಸಿಕೊಳ್ಳಲಿದ್ದೀರಿ. ಸಾಮಾಜಿಕಜವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಆದರೆ ನೆರೆಹೊರೆಯವರಿಂದ ಚಾಡಿ ಮಾತು ಕೇಳಿಬಂದೀತು. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಧನು: ಬಂಧು ವರ್ಗದವರ ನಡುವೆ ನಿಮ್ಮ ಗೌರವ ಹೆಚ್ಚಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಚಿಂತೆಯಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮಕರ: ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಕೊಂಚ ಮಟ್ಟಿನ ಚೇತರಿಕೆ, ಲಾಭ ಕಂಡುಬರುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಸಕಾಲ. ಅನಗತ್ಯ ಖರ್ಚುಗಳನ್ನು ಮಿತಗೊಳಿಸಿ.

ಕುಂಭ: ಮಹಿಳೆಯರಿಗೆ ಬಿಡುವಿಲ್ಲದ ದುಡಿಮೆಯಿಂದ ದೇಹಾಯಾಸವಾದೀತು. ಸಹೋದರರ ವಿವಾಹ ಪ್ರಯತ್ನದಲ್ಲಿ ಸಫಲರಾಗುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಒಳಿತಾಗುವುದು. ನಯವಂಚಕರ ಹುನ್ನಾರಗಳು ಬಯಲಿಗೆ ಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ಕಳೆದು ಹೋದ ವಸ್ತುಗಳು ಮರಳಿ ಕೈಸೇರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಿಂದ ಹೊರಗೆ ಹೋಗುವಾಗ ಹಾಗೂ ಬರುವಾಗ ತಪ್ಪದೇ ಈ ನಿಯಮ ಪಾಲಿಸಿ