Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 19 ಸೆಪ್ಟಂಬರ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮನ್ನು ಟೀಕಿಸಿದವರ ಎದುರು ತಲೆ ಎತ್ತಿ ನಿಲ್ಲುವ ಸಂದರ್ಭ ಎದುರಾಗಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಸಾಮಾಜಿಕವಾಗಿ ಪ್ರಶಂಸೆ ಸಿಗಲಿದೆ. ಹಾಗಂತ ಕೆಲಸ ಕಾರ್ಯಗಳಿಂದ ಬಿಡುವಿರದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ ಅಲೆದಾಡಬೇಕಾದೀತು. ನಿಮ್ಮ ಕಷ್ಟಗಳಿಗೆ ಸಂಗಾತಿ ಹೆಗಲುಕೊಡಲಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮಗೆ ಲಾಭಕರ ಎನಿಸುವ ವೃತ್ತಿಯ ಬಗ್ಗೆ ಯೋಚನೆ ಮಾಡಲಿದ್ದೀರಿ. ಸರಕಾರಿ ಅಧಿಕಾರಿಗಳಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ನಿಮ್ಮ ಹಿತಶತ್ರುಗಳ ನಾಟಕಗಳು ಬಯಲಾಗಲಿದೆ. ಸಹೋದ್ಯೋಗಿಗಳೊಂದಿಗೆ ನಿಮ್ಮ ಸಂಬಂಧ ವೃದ್ಧಿಯಾಗಲಿದೆ ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳ ಮನೆಯವರ ಒಪ್ಪಿಗೆ ಸಿಗುವುದು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ. ಇಷ್ಟದೇವರ ಪ್ರಾರ್ಥನೆ ಮಾಡಿ.



ಕನ್ಯಾ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗಲಿದೆ.

ತುಲಾ: ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಹೊಸ ಭರವಸೆ ಮೂಡಲಿದೆ. ಇಷ್ಟ ಭೋಜನ ಮಾಡುವ ಯೋಗವಿದ್ದು, ನಾಲಿಗೆ ಚಪಲಕ್ಕೆ ಕಡಿವಾಣವಿರಲಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು. ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಟ್ಟರೆ ಉತ್ತಮ. ದೇವತಾ ಪ್ರಾರ್ಥನೆ ಮರೆಯದಿರಿ.

ಧನು: ನಿಮ್ಮ ವೃತ್ತಿಜೀವನಕ್ಕೆ ಸಂಚಕಾರ ಬರುವಂತಹ ಘಟನೆಗಳು ನಡೆದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನೂತನ ದಂಪತಿಗಳಿಗೆ ಶೀಘ್ರ ಸಂತಾನ ಫಲ ಸೂಚನೆ ಕಂಡುಬರಲಿದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಮಕರ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ, ಲಾಭ ಕಂಡುಬರಲಿದೆ. ನಿಮ್ಮ ಕೆಲಸ ಕಾರ್ಯಗಳ ಬಗ್ಗೆ ನಿಮ್ಮ ಮನದಲ್ಲಿ ತೃಪ್ತಿಯ ಭಾವ ಮೂಡಲಿದೆ. ಮೇಲಧಿಕಾರಿಗಳ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕುಂಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಅಡ್ಡಿಗಳು ಎದುರಾದರೂ ಅಂತಿಮ ಜಯ ನಿಮ್ಮದಾಗುವುದು. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಮಕ್ಕಳಿಂದ ಸಂತಸದ ವಾರ್ತೆ ಸಿಗಲಿದೆ. ಹಳೆಯ ಮಿತ್ರರ ಭೇಟಿಯಾಗುವ ಯೋಗವಿದೆ.

ಮೀನ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಚಿಂತೆ ಬೇಕಾಗಿಲ್ಲ. ಹಣಕಾಸಿನ ವಿಚಾರದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ವ್ಯಾಪಾರಿಗಳು ಲಾಭ ಅನುಭವಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments