ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 20 ಸೆಪ್ಟಂಬರ್ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಸಾಯಗಾರರಿಗೆ ಉತ್ತಮ ಅಭಿವೃದ್ಧಿದಾಯಕ ದಿನ. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ಪಾವತಿಯಾಗಲಿದ್ದು, ಚೇತರಿಕೆ ಕಂಡುಬರಲಿದೆ. ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಬಯಲಿದೆ.  ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಪ್ರೀತಿ ಪಾತ್ರರ ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಆಧುನಿಕತೆಯ ಸುಖಲೋಲುಪಗಳ ಬಗ್ಗೆ ಮನಸ್ಸು ಸೆಳೆಯಲಿದೆ. ಆರ್ಥಿಕವಾಗಿ ಅಧಿಕ ಧನವ್ಯಯ ಮಾಡಿದರೆ ಮುಂದೆ ತೊಂದರೆಯಾದೀತು. ಇಷ್ಟ ಮಿತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ.

ಕರ್ಕಟಕ: ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುವ ಯೋಗವಿದೆ.

ಸಿಂಹ: ಹೂಡಿಕೆ ವ್ಯವಹಾರಗಳು ಕೈ ಹಿಡಿಯಲಿವೆ. ಮನೆಯಲ್ಲಿ ಕುಟುಂಬ ಸದಸ್ಯರ ನಡುವೆ ಸಾಮರಸ್ಯದ ಕೊರತೆ ಕಂಡುಬಂದೀತು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಮನಸ್ಸಿಗೆ ಇಷ್ಟವಾಗುವವರ ಭೇಟಿ ನೆಮ್ಮದಿ ಕೊಡಲಿದೆ.



ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳಿಗೆ ಸಿದ್ಧತೆ ನಡೆಸುವಿರಿ. ಸಂಗಾತಿಯ ಕೆಲಸಗಳಿಗೆ ಹೆಗಲು ಕೊಡಲಿದ್ದೀರಿ. ಮಕ್ಕಳ ಜತೆ ಸಂತೋಷದ ಕ್ಷಣ ಅನುಭವಿಸುತ್ತೀರಿ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ತುಲಾ: ಕೆಟ್ಟ ಜನರ ಸಂಗದಿಂದ ದೂರವಿದ್ದಷ್ಟು ಉತ್ತಮ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ಬೇಕಾದ ವಸ್ತುಗಳ ಖರೀದಿ ಮಾಡಲಿದ್ದೀರಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ.

ವೃಶ್ಚಿಕ: ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ವ್ಯವಹಾರಗಳು ನಿಧಾನವಾಗಿ ಚೇತರಿಕೆಯಾಗಲಿದೆ. ಅಂದುಕೊಂಡಿದ್ದನ್ನು ಸಾಧಿಸಿದ ಸಂತಸ ನಿಮ್ಮದಾಗಲಿದೆ. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ಅಗತ್ಯ. ಕಿರು ಸಂಚಾರ ಮಾಡುವಿರಿ.

ಧನು: ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾದ ಸಂತಸ ನಿಮ್ಮದಾಗಲಿದೆ. ಆದರೆ ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರಿಗೆ ನಿಮ್ಮ ಗುಟ್ಟು ಬಿಟ್ಟುಕೊಡಬೇಡಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಮಕರ: ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಅಗತ್ಯ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕುಂಭ: ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಬಂಧುಮಿತ್ರರ ಚಾಡಿ ಮಾತುಗಳಿಂದ ಮನಸ್ಸಿಗೆ ಬೇಸರವಾದೀತು. ಆತ್ಮಸ್ಥೈರ್ಯ ರೂಢಿಸಿಕೊಳ್ಳಿ. ಆಸ್ತಿ, ವಾಹನ ಖರೀದಿಗೆ ಸಕಾಲ. ಭವಿಷ್ಯದ ಯೋಜನೆಗಳಿಗೆ ಚಾಲನೆ ನೀಡುವಿರಿ.

ಮೀನ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಲಿದ್ದಾರೆ. ವಾಹನ ಸವಾರರಿಗೆ ಅಪಘಾತದ ಭಯವಿದ್ದು, ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಬಹಳ ದಿನಗಳಿಂದ ಭೇಟಿಯಾಗಬೇಕೆಂದಿದ್ದ ವ್ಯಕ್ತಿಗಳ ಭೇಟಿಯಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments