Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 22 ಸೆಪ್ಟಂಬರ್ 2020 (09:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಮನೆಯ ಹಿರಿಯರ ಹಿತವಚನಗಳು ಸಮಾಧಾನ ತರಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅನುಕೂಲಕರವಾದ ವಾತಾವರಣವಿರಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಕೂಡಿಟ್ಟ ಹಣ ಖರ್ಚಾಗುವ ಭೀತಿ ಎದುರಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ.

ಮಿಥುನ: ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಂಡುಬಂದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಇಷ್ಟ ಮಿತ್ರರ ಭೇಟಿಯಾಗುವ ಯೋಗವಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ.

ಕರ್ಕಟಕ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಿಂಹ: ಮಹಿಳೆಯರಿಗೆ ಬಹುದಿನಗಳ ಮನದ ಬಯಕೆ ಈಡೇರಿದ ಸಂತಸ ಸಿಗಲಿದೆ. ಬಂಧು ಮಿತ್ರರ ಭೇಟಿ ಸಂತೋಷ ಇಮ್ಮಡಿಗೊಳಿಸಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಮುನ್ನಡೆ ಪಡೆಯಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.



ಕನ್ಯಾ: ನಿಮ್ಮ ಕನಸುಗಳು ಸದ್ಯದಲ್ಲೇ ನನಸಾಗಲಿವೆ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾದೀತು. ಕೃಷಿಕರಿಗೆ ಬೆಳೆ ನಷ್ಟದ ಭೀತಿ ಎದುರಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ಮನಸ್ಸಿಗೆ ಅನಿಸಿದ್ದನ್ನು ಮಾಡುತ್ತಾ ಸಾಗಿದರೆ ನಿಮಗೆ ಉತ್ತಮ. ಕ್ರಿಯಾತ್ಮಕ ಯೋಚನೆಗಳು ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಲ್ಲದು. ಇಷ್ಟದೇವರ ಪ್ರಾರ್ಥನೆಯಿಂದ ಶುಭವಾಗಲಿದೆ.

ವೃಶ್ಚಿಕ: ಸಮಸ್ಯೆಗಳ ಪರಿಹಾರಕ್ಕೆ ಕೆಲವು ಪರ್ಯಾಯ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಯಾವುದೇ ವಿಚಾರವಾದರೂ ಸಂಗಾತಿಯೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಬಯಸಿದ ಫಲಿತಾಂಶ ಸಿಗಲಿದೆ.

ಧನು: ಮನಸ್ಸಿಗೆ ಹತ್ತಿರವಾದವರ ಬಳಿ ಭಾವನೆಗಳನ್ನು ಹಂಚಿಕೊಳ್ಳಲು ಹಿಂಜರಿಯುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಉದ್ಯೋಗದಲ್ಲಿ ಸ್ಥಾನ ಪಲ್ಲಟ ಭೀತಿಯಿದೆ.

ಮಕರ: ಕೊರಗುತ್ತಾ ಕೂರುವುದರಿಂದ ಪ್ರಯೋಜನವಾಗದು. ಸಮಸ್ಯೆಗಳ ಪರಿಹಾರಕ್ಕೆ ಆತ್ಮಸ್ಥೈರ್ಯದಿಂದ ಮುನ್ನಡೆಯುವ ಅಗತ್ಯವಿದೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕುಂಭ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಮನಸ್ಸಾಗಲಿದೆ. ಅನಿರೀಕ್ಷಿತ ಪ್ರಯಾಣಕ್ಕೆ ಸಿದ್ಧರಾಗಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಕೆಲಸದೊತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಶಿಕ್ಷಕರಿಂದ ಪ್ರಶಂಸೆಗೊಳಗಾಗುವರು.

ಮೀನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಹಣಕಾಸಿನ ಹರಿವು ಉತ್ತಮವಾಗಿರಲಿದ್ದು, ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಏಳು ದಿನ ಹೀಗೆ ಮಾಡಿದರೆ ನಿಮ್ಮನೆಯಲ್ಲಿರುವ ದುಷ್ಟ ಶಕ್ತಿ ನಿವಾರಣೆಯಾಗುತ್ತದೆ