Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 23 ಸೆಪ್ಟಂಬರ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾರ್ವಜನಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ನಿಮ್ಮ ಮಾತುಗಳಿಗೆ ಗೌರವ ಸಿಗಲಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದಾರೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ವೃಷಭ: ನಿಮ್ಮ ಮೃದು ಸ್ವಭಾವವನ್ನು ದುರುಪಯೋಗಪಡಿಸಿಕೊಳ್ಳುವವರಿರುತ್ತಾರೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆರೋಗ್ಯದಲ್ಲಿ ಏರುಪೇರಾಗಲಿದ್ದು, ಕಾಳಜಿ ವಹಿಸಬೇಕು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನಸ್ಸಿನ ಭಾವನೆಗಳಿಗೆ ಬೆಲೆಕೊಡಿ. ನಿಮ್ಮ ಯೋಜನೆಗಳಿಗೆ ವಿಘ್ನಗಳು ಎದುರಾದರೂ ಅಂತಿಮವಾಗಿ ಜಯ ನಿಮ್ಮದಾಗಲಿದೆ. ಮನೆಯಲ್ಲಿ ಪತ್ನಿ-ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ತೋರಿಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ಯೋಗ್ಯ ವಯಸ್ಕರಿಗೆ ಶೀಘ್ರವೇ ಉತ್ತಮ ಸಂಬಂಧ ಕೂಡಿಬರಲಿದೆ. ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ದಿಡೀರ್ ರದ್ದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ.

ಕನ್ಯಾ: ದೈವಾನುಕೂಲದಿಂದ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಹಳೆಯ ಮಿತ್ರರ ಭೇಟಿ ಮನಸ್ಸಿಗೆ ಸಂತಸ ನೀಡಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಇಷ್ಟ ಭೋಜನ ಯೋಗವಿದೆ.

ತುಲಾ: ಕಾರ್ಯರಂಗದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಇದುವರೆಗೆ ಇದ್ದ ಹಣಕಾಸಿನ ಸಮಸ್ಯೆಗಳು ದೂರವಾಗಲಿದ್ದು, ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ಮನಸ್ಸಿಗೆ ಅಂದುಕೊಂಡಿದ್ದನ್ನು ಮಾಡಲಿದ್ದೀರಿ.

ವೃಶ್ಚಿಕ: ಗೃಹಿಣಿಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಕೌಟುಂಬಿಕವಾಗಿ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಹಿರಿಯರ ಸೇವೆ ಮಾಡುವ ಸೌಭಾಗ್ಯ ಒದಗಿಬರಲಿದೆ. ಆರ್ಥಿಕವಾಗಿ ಕೊಂಚ ಹಣಕಾಸಿನ ಮುಗ್ಗಟ್ಟು ತೋರಿಬಂದರೂ ನಿಮ್ಮ ಕಾರ್ಯ ಸಾಧನೆಗೆ ತೊಂದರೆಯಾಗದು. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉದಾಸೀನ ಪ್ರವೃತ್ತಿ ಬಿಡುವುದು ಉತ್ತಮ.

ಮಕರ: ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಮನಸ್ಸಿಗೆ ಉಲ್ಲಾಸ ನೀಡುವ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಸರಕಾರಿ ಕೆಲಸದಲ್ಲಿರುವವರಿಗೆ ಉದ್ಯೋಗದೊತ್ತಡ ಹೆಚ್ಚಬಹುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಇದರಿಂದಾಗಿ ದೇಹಾಯಾಸವಾಗಬಹುದು. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಬಂಧು ವರ್ಗದವರಿಂದ ನಿಮ್ಮ ಕೆಲಸ ಕಾರ್ಯಗಳ ಬಗ್ಗೆ ವ್ಯಂಗ್ಯದ ಮಾತು ಕೇಳಿಬಂದೀತು. ಆದರೆ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮುಂದುವರಿಯಿಸಿ. ಹೂಡಿಕೆ ವ್ಯವಹಾರಗಳಿಂದ ಲಾಭ ಪಡೆಯಲಿದ್ದೀರಿ. ಮಹಿಳೆಯರಿಗೆ ಬಿಡುವಿನ ಖುಷಿ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments