Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 25 ಸೆಪ್ಟಂಬರ್ 2020 (09:14 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಕೃಷಿ ಕ್ಷೇತ್ರದಲ್ಲಿ ಉನ್ನತಿ ಕಂಡುಬರಲಿದೆ. ವ್ಯಾಪಾರಿ ವ್ಯವಹಾರಿಗಳಿಗೆ ಆರ್ಥಿಕವಾಗಿ ನಿವ್ವಳ ಲಾಭ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಂಬಂಧ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಕಾರ್ಮಿಕ ವರ್ಗದವರಿಗೆ ಉದ್ಯೋಗ ನಷ್ಟವಾಗುವ ಭೀತಿಯಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ರಾಜಕೀಯ ವರ್ಗದವರಿಗೆ ಮುನ್ನಡೆ ತೋರಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಣಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಬರಲಿದೆ. ಬಳಸಿಕೊಳ್ಳಿ.

ಸಿಂಹ: ವೃತ್ತಿರಂಗದಲ್ಲಿ ಮುನ್ನಡೆಯ ಯೋಗವಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕನ್ಯಾ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರ ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಯೋಗ್ಯ ವಯಸ್ಕರಿಗೆ ಯೋಗ್ಯ ಸಂಬಂಧ ಸಿಗಲು ಕೆಲವು ದಿನ ಕಾಯಬೇಕಾಗಬಹುದು. ತಾಳ್ಮೆಯಿರಲಿ.

ತುಲಾ: ಸಕಾಲದಲ್ಲಿ ಧನಾಗಮನವಾಗಲಿರುವುದರಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಬಹಳ ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತಸ ಸಿಗಲಿದೆ. ಪ್ರೇಮಿಗಳ ಗುಟ್ಟು ಮನೆಯವರೆದುರು ಬಹಿರಂಗವಾಗಲಿದೆ.

ವೃಶ್ಚಿಕ: ಮಾನಸಿಕವಾಗಿ ನಿರುತ್ಸಾಹ ಮೂಡಲಿದ್ದು, ಕಾರ್ಯಕ್ಷೇತ್ರದಲ್ಲಿ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ದೈವಾನುಕೂಲದಿಂದ ದಾಯಾದಿ ವ್ಯಾಜ್ಯಗಳು ಪರಿಹಾರವಾಗಲಿದೆ. ಕಳೆದು ಹೋದ ವಸ್ತು ಮರಳಿ ಪಡೆಯಲು ಪ್ರಯತ್ನ ನಡೆಸುವಿರಿ.

ಧನು: ನೆರೆಹೊರೆಯವರು ನಿಮ್ಮ ಮುಗ್ಧತೆಯ ಲಾಭ ಪಡೆಯಲು ಯತ್ನಿಸುತ್ತಾರೆ. ಎಚ್ಚರಿಕೆಯಿಂದ ವರ್ತಿಸಿ. ಸಂಗಾತಿಯ ಕಷ್ಟಗಳಿಗೆ ನೆರವಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ಕೃಷಿಕರಿಗೆ ಮುನ್ನಡೆ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸುವ ಸಾಧಿಸಲು ಹಲವು ಅಡೆತಡೆಗಳು ಬಂದೀತು. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಜೀವನದಲ್ಲಿ ಏಳು ಬೀಳುಗಳು ಸಾಮಾನ್ಯ. ಆದರೆ ಸಣ್ಣ ವಿಚಾರಕ್ಕೆ ತಲೆಕೆಡಿಸಿಕೊಳ್ಳದೇ ಮುಂದುವರಿದರೆ ಮುಂದೆ ಒಳಿತಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕಾರ್ಯದೊತ್ತಡದಿಂದ ದಣಿವಾದೀತು. ಶುಭಫಲಗಳಿಗೆ ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಮಹಿಳೆಯರಿಗೆ ಬಹಳ ದಿನಗಳ ಕನಸು, ಬಯಕೆ ಈಡೇರಿದ ಸಂತಸ ಸಿಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ತಾಳ್ಮೆ, ಸಂಯಮವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಅಕ್ಕ ತಂಗಿಗೆ ಕೊಡಬೇಡಿ