Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (09:14 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಕೃಷಿ ಕ್ಷೇತ್ರದಲ್ಲಿ ಉನ್ನತಿ ಕಂಡುಬರಲಿದೆ. ವ್ಯಾಪಾರಿ ವ್ಯವಹಾರಿಗಳಿಗೆ ಆರ್ಥಿಕವಾಗಿ ನಿವ್ವಳ ಲಾಭ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಂಬಂಧ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಕಾರ್ಮಿಕ ವರ್ಗದವರಿಗೆ ಉದ್ಯೋಗ ನಷ್ಟವಾಗುವ ಭೀತಿಯಿದೆ. ಸಹೋದ್ಯೋಗಿಗಳ ಕಷ್ಟಗಳಿಗೆ ನೆರವಾಗಲಿದ್ದೀರಿ. ರಾಜಕೀಯ ವರ್ಗದವರಿಗೆ ಮುನ್ನಡೆ ತೋರಿಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಣಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಬರಲಿದೆ. ಬಳಸಿಕೊಳ್ಳಿ.

ಸಿಂಹ: ವೃತ್ತಿರಂಗದಲ್ಲಿ ಮುನ್ನಡೆಯ ಯೋಗವಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕನ್ಯಾ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಸಂಗಾತಿಯ ಸಹಕಾರ ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಯೋಗ್ಯ ವಯಸ್ಕರಿಗೆ ಯೋಗ್ಯ ಸಂಬಂಧ ಸಿಗಲು ಕೆಲವು ದಿನ ಕಾಯಬೇಕಾಗಬಹುದು. ತಾಳ್ಮೆಯಿರಲಿ.

ತುಲಾ: ಸಕಾಲದಲ್ಲಿ ಧನಾಗಮನವಾಗಲಿರುವುದರಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಬಹಳ ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತಸ ಸಿಗಲಿದೆ. ಪ್ರೇಮಿಗಳ ಗುಟ್ಟು ಮನೆಯವರೆದುರು ಬಹಿರಂಗವಾಗಲಿದೆ.

ವೃಶ್ಚಿಕ: ಮಾನಸಿಕವಾಗಿ ನಿರುತ್ಸಾಹ ಮೂಡಲಿದ್ದು, ಕಾರ್ಯಕ್ಷೇತ್ರದಲ್ಲಿ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ದೈವಾನುಕೂಲದಿಂದ ದಾಯಾದಿ ವ್ಯಾಜ್ಯಗಳು ಪರಿಹಾರವಾಗಲಿದೆ. ಕಳೆದು ಹೋದ ವಸ್ತು ಮರಳಿ ಪಡೆಯಲು ಪ್ರಯತ್ನ ನಡೆಸುವಿರಿ.

ಧನು: ನೆರೆಹೊರೆಯವರು ನಿಮ್ಮ ಮುಗ್ಧತೆಯ ಲಾಭ ಪಡೆಯಲು ಯತ್ನಿಸುತ್ತಾರೆ. ಎಚ್ಚರಿಕೆಯಿಂದ ವರ್ತಿಸಿ. ಸಂಗಾತಿಯ ಕಷ್ಟಗಳಿಗೆ ನೆರವಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ಕೃಷಿಕರಿಗೆ ಮುನ್ನಡೆ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸುವ ಸಾಧಿಸಲು ಹಲವು ಅಡೆತಡೆಗಳು ಬಂದೀತು. ಆದರೆ ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಜೀವನದಲ್ಲಿ ಏಳು ಬೀಳುಗಳು ಸಾಮಾನ್ಯ. ಆದರೆ ಸಣ್ಣ ವಿಚಾರಕ್ಕೆ ತಲೆಕೆಡಿಸಿಕೊಳ್ಳದೇ ಮುಂದುವರಿದರೆ ಮುಂದೆ ಒಳಿತಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕಾರ್ಯದೊತ್ತಡದಿಂದ ದಣಿವಾದೀತು. ಶುಭಫಲಗಳಿಗೆ ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಮಹಿಳೆಯರಿಗೆ ಬಹಳ ದಿನಗಳ ಕನಸು, ಬಯಕೆ ಈಡೇರಿದ ಸಂತಸ ಸಿಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ತಾಳ್ಮೆ, ಸಂಯಮವಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments