Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 27 ಸೆಪ್ಟಂಬರ್ 2020 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೃಷಿಕರು ಬೆಳೆ ನಷ್ಟ ಅನುಭವಿಸಬೇಕಾಗಿ ಬಂದೀತು. ಪರಿಸ್ಥಿತಿಗೆ ತಕ್ಕ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಬೆನ್ನು ನೋವಿನ ಸಮಸ್ಯೆ ಕಾಡಬಹುದು. ಗೃಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ತಾಳ್ಮೆ ಅಗತ್ಯ.

ವೃಷಭ: ಕಾರ್ಮಿಕ ವರ್ಗದವರಿಗೆ ಉದ್ಯೋಗದಲ್ಲಿ ಕಷ್ಟ-ನಷ್ಟ ಎದುರಾಗಬಹುದು. ಎಲ್ಲವನ್ನೂ ಎದುರಿಸಲು ಮಾನಸಿಕವಾಗಿ ಸಿದ್ಧರಾಗಬೇಕಾಗುತ್ತದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ತಪ್ಪಿ ಹೋದೀತು. ಚಿಂತೆ ಬೇಡ, ತಾಳ್ಮೆಯಿರಲಿ.

ಮಿಥುನ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಾಯಾದಿಗಳೊಂದಿಗಿನ ಅಸಮಾಧಾನಗಳ ಇತ್ಯರ್ಥಕ್ಕೆ ಹಿರಿಯರ ಸಲಹೆ ಪಡೆಯಿರಿ. ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳು ಬಂದರೂ ಕಾರ್ಯಸಾಧನೆಗೆ ತೊಂದರೆಯಾಗದು.

ಕರ್ಕಟಕ: ಯೋಗ್ಯ ವಯಸ್ಕರಿಗೆ ಪ್ರಯತ್ನಪಟ್ಟರೆ ಉತ್ತಮ ಸಂಬಂಧಗಳು ಕೂಡಿಬಂದೀತು. ಸ್ವಯಂ ಉದ್ಯೋಗಿಗಳಿಗೆ ಲಾಭ ಗಳಿಸಲು ನಾನಾ ದಾರಿಗಳು ಗೋಚರವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಸಿಂಹ: ನೀವು ಅಂದುಕೊಂಡಂತೆಯೇ ಎಲ್ಲಾ ಕೆಲಸಗಳೂ ನಡೆಯಲಿವೆ. ಜೀವನದಲ್ಲಿ ಬರುವ ಕಷ್ಟಗಳನ್ನು ಎದುರಿಸಲು ಆತ್ಮಸ್ಥೈರ್ಯ ಅಗತ್ಯ. ಇಷ್ಟಮಿತ್ರರ ಭೇಟಿ ಯೋಗವಿದ್ದು, ಮನಸ್ಸಿಗೆ ಸಂತೋಷ ಸಿಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕನ್ಯಾ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಂದುಕೊಂಡ ವ್ಯವಹಾರಗಳನ್ನು ಹಂತ ಹಂತವಾಗಿ ಮಾಡಿ ಮುಗಿಸಲಿದ್ದೀರಿ. ಮಕ್ಕಳೊಂದಿಗೆ ಸಂತಸದ ಕ್ಷಣ ಕಳೆಯಲಿದ್ದೀರಿ. ವ್ಯವಹಾರದಲ್ಲಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ.

ತುಲಾ: ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಅಲಕ್ಷಿಸುವುದು ಬೇಡ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಅನಿರೀಕ್ಷಿತವಾಗಿ ಪ್ರೀತಿ ಪಾತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ವೃತ್ತಿರಂಗದಲ್ಲಿ ನಿಮ್ಮ ಕ್ಷಮತೆ ಹೆಚ್ಚಿಸಲು ಹೊಸ ದಾರಿಗಳನ್ನು ಹುಡುಕಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಮಹಿಳೆಯರಿಗೆ ಚಿನ್ನಾಭರಣ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಹಿರಿಯರಿಂದ ಬಂದ ಬಳುವಳಿ ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಾಥ್ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಕರ: ಕಾರ್ಯರಂಗದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಬೇಡದ ಯೋಚನೆಗಳನ್ನು ಬದಿಗಿಟ್ಟು ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿದೆ. ದಿನದಂತ್ಯಕ್ಕೆ ಖುಷಿ.

ಕುಂಭ: ಮಹಿಳೆಯರಿಗೆ ಬಿಡುವಿಲ್ಲದ ಗೃಹ ಕೃತ್ಯಗಳಿಂದ ದೇಹಾಯಾಸವಾದೀತು. ತಾಳ್ಮೆ, ಸಂಯಮ ಅಗತ್ಯ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರಾಗಲಿದ್ದು, ಮನಸ್ಸಿಗೆ ಚಿಂತೆಯಾಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ದಾರಿ ಕಂಡುಕೊಳ್ಳಲಿದ್ದಾರೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಸರಸ್ವತಿದೇವಿಯನ್ನು ಒಲಿಸಿಕೊಳ್ಳಲು ಇವರನ್ನು ಪೂಜಿಸಿ