Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 30 ಸೆಪ್ಟಂಬರ್ 2020 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಆರ್ಥಿಕವಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣವಿರಲಿದೆ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆಯಿರಬೇಕು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಾಧನೆಯನ್ನು ಯಾರೂ ತಡೆಯಲಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ದೇಹಾರೋಗ್ಯದ ಬಗ್ಗೆ ಅಧಿಕ ಕಾಳಜಿ ವಹಿಸಬೇಕಾದ ಅಗತ್ಯವಿದೆ. ಸಣ್ಣ ತಪ್ಪಿಗೂ ದೊಡ್ಡ ಬೆಲೆ ತೆರಬೇಕಾದೀತು. ಹಿರಿಯರೊಂದಿಗೆ ಗೌರವ ಪೂರ್ವಕವಾಗಿ ನಡೆದುಕೊಳ್ಳಿ. ಸಂಗಾತಿಯ ಮನದಾಸೆ ಈಡೇರಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ರಾಜಕೀಯ ರಂಗದಲ್ಲಿರುವವರಿಗೆ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ನೂತನ ದಂಪತಿಗಳು ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗುವರು.

ಕರ್ಕಟಕ: ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಮಾನಸಿಕ ನೆಮ್ಮದಿ ಕಂಡುಕೊಳ್ಳಲಿದ್ದಾರೆ. ಕೌಟುಂಬಿಕವಾಗಿ ವಿವಿಧ ಖರ್ಚು ವೆಚ್ಚಗಳು ಕಂಡುಬಂದೀತು. ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ.

ಸಿಂಹ: ವ್ಯಾವಹಾರಿಕವಾಗಿ ನಿಮ್ಮ ಬೆನ್ನ ಹಿಂದೆ ನಡೆಯುತ್ತಿದ್ದ ವಂಚನೆ, ಮೋಸಗಳು ಬಯಲಿಗೆ ಬರಲಿವೆ. ವ್ಯಾಪಾರ, ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಹುಡುಕಾಟಕ್ಕಾಗಿ ಪ್ರಯಾಣ ಮಾಡಬೇಕಾಗುತ್ತದೆ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮಿಶ್ರಫಲ ಕಂಡುಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ತುಲಾ: ಇಷ್ಟ ಮಿತ್ರರೊಂದಿಗೆ ಭೋಜನ, ಕಿರು ಸಂಚಾರ ಯೋಗವಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಬಹುದು. ಮಿತಿಯಿರಲಿ. ವೃತ್ತಿರಂಗದಲ್ಲಿ ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗಲಿದೆ. ಮನಸ್ಸಿನ ನೆಮ್ಮದಿಗಾಗಿ ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಆಕಸ್ಮಿಕವಾಗಿ ಧನಲಾಭವಾದೀತು. ಆದರೆ ಹಿರಿಯರ ದೇಹಾರೋಗ್ಯ ಏರುಪೇರಾಗಲಿದ್ದು, ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಮಸ್ಯೆ ಬಗೆಹರಿಸುವಿರಿ.

ಧನು: ನೆರೆಹೊರೆಯವರ ಮುಂದೆ ನಿಮ್ಮ ಗುಟ್ಟು ಬಯಲಾಗದಂತೆ ನೋಡಿಕೊಳ್ಳಿ. ನಿಮ್ಮ ಸ್ವ ಸಾಮರ್ಥ್ಯದಿಂದ ಮುಂದೆ ಬರಲು ಯತ್ನಿಸಿರಿ. ಅತಿಯಾದ ಅವಲಂಬನೆ ಬೇಡ. ಸಂಗಾತಿಯಿಂದ ಅನಿರೀಕ್ಷಿತ ಸಂತಸದ ವಾರ್ತೆ ಆಲಿಸಲಿದ್ದೀರಿ.

ಮಕರ: ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಗಳಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನಡೆಸಲು ಸಿದ್ಧತೆ ನಡೆಸುವಿರಿ.

ಕುಂಭ: ನಿಮ್ಮ ಕೆಲಸ ಕಾರ್ಯಗಳನ್ನು ನೋಡಿ ಅಣಕಿಸುವವರನ್ನು ನಿರ್ಲಕ್ಷಿಸುವುದೇ ಒಳಿತು. ಅವಿವಾಹಿತ ಕನ್ಯಾಮಣಿಗಳಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ಉನ್ನತಾಧಿಕಾರದ ಯೋಗವಿದೆ. ಮಕ್ಕಳಿಂದ ಸಂತಸ ಸಿಗಲಿದೆ.

ಮೀನ: ಚಿಂತಿತ ಕಾರ್ಯಗಳು ಅಂದುಕೊಂಡಂತೇ ನಡೆಯಲಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪಾಲು ಬಂಡವಾಳ ವ್ಯವಹಾರದಲ್ಲಿ ಮುನ್ನಡೆ ತೋರಿಬರಲಿದೆ. ಆದರೆ ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯಕ್ಕೆ ಯೋಜನೆ ರೂಪಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಿಣಿಯರು ಯಾವಾಗಲೂ ಇದನ್ನು ಧರಿಸಿದರೆ ಆರೋಗ್ಯವಂತರಾಗಿರುತ್ತಾರೆ