Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 1 ಅಕ್ಟೋಬರ್ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಪೋಷಕರಿಗೆ ನಿಮ್ಮ ಕೆಲವೊಂದು ಮಾತುಗಳು ಬೇಸರವುಂಟುಮಾಡೀತು. ತಾಳ್ಮೆ, ಸಂಯಮವಿರಲಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಂಬಂಧಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿ ಹೆಗಲಿಗೇರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ನಿಮ್ಮ ಸಾಧನೆ ಪೋಷಕರ ಹೆಮ್ಮೆಗೆ ಕಾರಣವಾಗುವುದು. ಉದ್ಯೋಗ ರಂಗದಲ್ಲಿ ಬೇಡದ ವಿಚಾರಕ್ಕೆ ಮೂಗು ತೂರಿಸಲು ಹೋಗಬೇಡಿ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ದೂರ ಪ್ರಯಾಣದಿಂದ ಕಾರ್ಯ ಸಿದ್ಧಿಯಾಗಲಿದೆ. ಅಂದುಕೊಂಡ ಕೆಲಸ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಮಾಡಿದ ಮುಗಿಸಿದ ನೆಮ್ಮದಿ ಸಿಗುವುದು. ಕಾರ್ಯನಿಮಿತ್ತ ಇಡೀ ದಿನ ಓಡಾಟ ನಡೆಸಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ನಿಮ್ಮ ಸ್ವ ಸಾಮರ್ಥ್ಯದ ಬಗ್ಗೆ ಅಶಂಕೆ ಬೇಡ. ವೃತ್ತಿರಂಗದಲ್ಲಿ ಹೊಸ ರೀತಿಯ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಕೊಂಚ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಭವಿಷ್ಯದ ದೃಷ್ಟಿಯಿಂದ ಆರ್ಥಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳುವುದು ಉತ್ತಮ. ಸ್ವಯಂ ವೃತ್ತಿಯವರಿಗೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಮಾನಸಿಕವಾಗಿ ಉದ್ವಿಗ್ನತೆ ಕಂಡುಬರಲಿದೆ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆಯಾಗುವುದು.

ತುಲಾ: ಮಕ್ಕಳಿಗೆ ಹೊಸ ವಸ್ತುಗಳ ಖರೀದಿ ಸಂಭ್ರಮವಿರಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗಲಿದೆ. ಪ್ರೀತಿ ಪಾತ್ರರನ್ನು ಸೇರಲು ಮನಸ್ಸು ಹಾತೊರೆಯುವುದು.

ವೃಶ್ಚಿಕ: ಯೋಗ್ಯ ವ್ಯಕ್ತಿಗಳ ಸಹಯೋಗದೊಂದಿಗೆ ಹೊಸ ಯೋಜನೆ ಆರಂಭಿಸಿದರೆ ಯಶಸ್ಸು ಕಾಣುವಿರಿ. ಮಹಿಳೆಯರಿಗೆ ತವರಿನಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ಆಹಾರದಲ್ಲಿ ವ್ಯತ್ಯಾಸವಾಗಿ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು, ಕಾಳಜಿಯಿರಲಿ.

ಧನು: ನಿಮ್ಮ ಮನಸ್ಸಿನ ಭಾವನೆಗನುಗುಣವಾಗಿ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಹಿಂದೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುತ್ತಾ ಕೂರುವ ಬದಲು ಹೊಸ ವಿಚಾರಗಳತ್ತ ಗಮನಕೊಡುವುದು ಉತ್ತಮ.

ಮಕರ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಸರಕಾರಿ ಕೆಲಸದಲ್ಲಿರುವವರಿಗೆ ಆರಾಮದಾಯಕ ದಿನವಾಗಲಿದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ದಾರಿಗಳು ಹೊಳೆಯಲಿವೆ.

ಕುಂಭ: ದೇಹಾರೋಗ್ಯದಲ್ಲಿ ಏರುಪೇರಾಗುವುದರಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಸಹಕಾರವಿರುವುದರಿಂದ ಎಂಥದ್ದೇ ಪರಿಸ್ಥಿತಿಯಾದರೂ ಎದೆಗುಂದುವುದು ಬೇಡ. ವೃತ್ತಿರಂಗದಲ್ಲಿ ಹೊಂದಾಣಿಕೆ ಅಗತ್ಯ.

ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದಾಗಿ ದೇಹಾಯಾಸವಾದೀತು. ಆರ್ಥಿಕವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂಬ ಸ್ಥಿತಿ ಬರಲಿದೆ. ಮಾಡಬೇಕಾಗಿದ್ದ ಶುಭ ಮಂಗಲ ಕಾರ್ಯಗಳನ್ನು ಮುಂದೂಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪಿತಪ್ಪಿಯೂ ಮಲಗುವ ಮಂಚದ ಮೇಲೆ ಈ ವಸ್ತುಗಳನ್ನು ಇಡಬೇಡಿ