ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 3 ಅಕ್ಟೋಬರ್ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಲ್ಲದರಲ್ಲೂ ಅತಿಯಾದ ಉತ್ಸಾಹದಿಂದ ತೊಡಗಿಸಿಕೊಳ್ಳುತ್ತೀರಿ. ಆದರೆ ಅತಿಯಾದ ನಿರೀಕ್ಷೆಗಳು ಕೆಲವೊಮ್ಮೆ ಬೇಸರಕ್ಕೆ ಕಾರಣವಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಕ್ಕಳ ಸಂತೋಷಕ್ಕಾಗಿ ಕೆಲವು ಕೆಲಸ ಮಾಡಲಿದ್ದೀರಿ.

ವೃಷಭ: ಆರ್ಥಿಕವಾಗಿ ದಿನೇ ದಿನೇ ಅಭಿವೃದ್ಧಿ ಕಂಡುಬರಲಿದೆ. ಮನೆಯಲ್ಲಿ ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸದಿಂದ ಒತ್ತಡ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿದ ಬೇಸರ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಸಣ್ಣ ಪುಟ್ಟ ವಿಚಾರಗಳಿಗೆ ಸಿಡಿಮಿಡಿಗೊಂಡು ಆಪ್ತರ ಮನಸ್ಸಿಗೆ ಬೇಸರವುಂಟು ಮಾಡಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಸಹೋದ್ಯೋಗಿಗಳ ಸಹಕಾರನ ಸಿಗಲಿದೆ.

ಕರ್ಕಟಕ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಲಿದ್ದಾರೆ. ಸಹವರ್ತಿಗಳ ಬಗ್ಗೆ ನಿಮ್ಮ ತಪ್ಪು ಕಲ್ಪನೆಗಳು ದೂರವಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕೆಲಸಗಳು ಯಶಸ್ವಿಯಾಗಲಿದೆ.

ಸಿಂಹ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದ್ದು, ಪೋಷಕರಿಗೆ ಸಂತಸ ಸಿಗಲಿದೆ. ವೃತ್ತಿರಂಗದಲ್ಲಿ ಹೊಸ ಅವಕಾಶಗಳು ಬಂದಾಗ ಬಳಸಿಕೊಳ್ಳುವುದನ್ನು ಕಲಿಯಬೇಕು. ಮೇಲಧಿಕಾರಿಗಳ ಕೃಪಾಕಟಾಕ್ಷೆಗೆ ಒಳಗಾಗಲಿದ್ದೀರಿ.

ಕನ್ಯಾ: ಮನೆಯ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಭಿನ್ನಾಬಿಪ್ರಾಯ ಮೂಡಿಬಂದೀತು. ಆದರೆ ತಾಳ್ಮೆ, ಸಂಯಮ ಅಗತ್ಯ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ತುಲಾ: ದೈವಾನುಗ್ರಹದಿಂದ ಇಷ್ಟು ದಿನ ನಡೆಯದೇ ಇದ್ದ ಕೆಲಸಗಳು ಇಂದು ಅನಿರೀಕ್ಷಿತವಾಗಿ ನಡೆದುಹೋಗಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರನನ್ನು ಭೇಟಿಯಾಗಲಿದ್ದೀರಿ. ಕಾರ್ಯರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷ ಬೇಡ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಪತ್ನಿ-ಮಕ್ಕಳ ಸಹಕಾರ ಸಿಗಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ.

ಧನು: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ಪರ ಊರಿಗೆ ಪ್ರಯಾಣ ಬೆಳೆಸಬೇಕಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ಬಿಟ್ಟು ಬಿಡಿ. ತಾಳ್ಮೆಯಿಂದ ನಿರ್ಧಾರ ತೆಗೆದುಕೊಳ್ಳಿ.

ಮಕರ: ಕೋಪದ ಕೈಗೆ ಬುದ್ಧಿ ಕೊಟ್ಟು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಕಂಡುಕೊ‍ಳ್ಳಿ. ಸರಕಾರಿ ಕೆಲಸದವರಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ.

ಕುಂಭ: ಮೆಚ್ಚಿನ ಕೆಲಸ ಮಾಡುವುದರಿಂದ ನಿಮ್ಮ ಮನಸ್ಸಿಗೂ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಸಿಗಲಿದೆ. ಮಕ್ಕಳ ವಿಚಾರವಾಗಿ ಸಂಗಾತಿಯೊಂದಿಗೆ ಸಂಘರ್ಷ ನಡೆಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಸ್ವಯಂ ಉದ್ಯೋಗಿಗಳಿಗೆ ಧನ ಗಳಿಕೆಗೆ ಹೊಸ ಮಾರ್ಗಗಳು ತೋರಿಬರಲಿವೆ. ಭವಿಷ್ಯದ ದೃಷ್ಟಿಯಿಂದ ಆರ್ಥಿಕವಾಗಿ ಉತ್ತಮ ಯೋಜನೆ ಹಾಕಿಕೊಳ್ಳಿ. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments