Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 9 ಅಕ್ಟೋಬರ್ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ದೇಹಾರೋಗ್ಯದಲ್ಲಿ ಏರುಪೇರಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ಅಧಿಕ ಖರ್ಚು ವೆಚ್ಚಗಳಗಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಮನಸ್ಸಿನ ನೆಮ್ಮದಿಗಾಗಿ ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಕಿರುಕುಳ ಕಂಡುಬರುವುದು. ನಿಮ್ಮ ದುಃಖ ದುಮ್ಮಾನಗಳನ್ನು ಸಂಗಾತಿಯ ಜತೆ ಹಂಚಿಕೊಳ‍್ಳಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ನೆರವೇರಿಸಲು ಅಡೆತಡೆಗಳು ತೋರಿಬಂದೀತು. ತಾಳ್ಮೆ ಅಗತ್ಯ.

ಮಿಥುನ: ಇಂದು ನಿಮ್ಮ ಮಾತಿನಿಂದಲೇ ಮನಸ್ತಾಪವಾಗುವ ಸಾಧ‍್ಯತೆಯಿದೆ. ಹೀಗಾಗಿ ತಾಳ್ಮೆ, ಸಂಯಮ ಅಗತ್ಯ. ಅಪರಿಚಿತರೊಂದಿಗೆ ವ್ಯವಹರಿಸಲು ಹೋಗಬೇಡಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಆತುರದಲ್ಲಿ ಕೈಗೊಳ್ಳುವ ನಿರ್ಧಾರಗಳು ಫಲ ಕೊಡದು. ಹೊಸ ಯೋಜನೆಗಳಿಗೆ ಕೈ ಹಾಕುವ ಮೊದಲು ಹಿರಿಯರೊಂದಿಗೆ ಪರಾಮರ್ಶೆ ನಡೆಸಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬರಬಹುದು. ಕಿರು ಸಂಚಾರ ಮಾಡುವಿರಿ.

ಸಿಂಹ: ಇತರರನ್ನು ಮೆಚ್ಚಿಸಲು ಹೋಗಿ ಕಷ್ಟಕ್ಕೆ ಸಿಲುಕಲಿದ್ದೀರಿ. ಅನಗತ್ಯವಾಗಿ ಬೇರೆಯವರ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಹೊಳೆಯಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಪ್ರೀತಿ ಪಾತ್ರರ ಆರೋಗ್ಯ ನಿಮ್ಮನ್ನು ಚಿಂತೆಗೀಡು ಮಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನಕ್ಕೇರುವ ಅವಕಾಶ ಹಿತಶತ್ರುಗಳಿಂದ ತಪ್ಪಿಹೋಗಬಹುದು. ಆದರೆ ನಿರಾಸೆ ಬೇಡ. ಮಕ್ಕಳಿಂದ ಸಂತಸದ ವಾರ್ತೆ ಕೇಳಲಿದ್ದೀರಿ.

ತುಲಾ: ನಿಮ್ಮ ಮನಸ್ಸಿನ ಮಾತಿನಂತೆ ನಡೆದುಕೊಂಡರೆ ಅಂದುಕೊಂಡಿದ್ದನ್ನು ಸಾಧಿಸಬಹುದು. ಮಹಿಳೆಯರಿಗೆ ತವರಿನ ಸಂಬಂಧಿಗಳನ್ನು ಮರಳಿ ಭೇಟಿಯಾಗುವ ಯೋಗ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುವುದು.

ವೃಶ್ಚಿಕ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಾತು ಬಲ್ಲವನಿಗೆ ಜಗಳವಿಲ್ಲ ಎನ್ನುವ ಹಾಗೆ ನಾಜೂಕಾಗಿ ಮಾತನಾಡಿ ಕೆಲಸ ಸಾಧಿಸಿಕೊಳ್ಳಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಸಂತಾನ ಹೀನ ದಂಪತಿಗಳು ದೇವರ ಹರಕೆ ತೀರಿಸಲು ಮುಂದಾಗುವರು. ಹಿರಿಯರಿಗೆ ವಾತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಕಿರು ಓಡಾಟ ನಡೆಸುವಿರಿ.

ಮಕರ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಲಿದ್ದಾರೆ. ವಾಹನ ಸವಾರರಿಗೆ ಅಪಘಾತದ ಭಯವಿದೆ. ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಇಷ್ಟದೇವರ ಪ್ರಾರ್ಥನೆ ಮಾಡಿ.

ಕುಂಭ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಅವಿವಾಹಿತ ಕನ್ಯಾಮಣಿಗಳಿಗೆ ಶೀಘ್ರವೇ ಕಂಕಣ ಬಲ ಕೂಡಿಬರುವುದು. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ. ಕೃಷಿಕರಿಗೆ ಬೆಳೆ ನಷ್ಟ ಸಂಭವವಿದೆ.

ಮೀನ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲು ಮುಂದಾಗಲಿದ್ದೀರಿ. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ?