Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 9 ಅಕ್ಟೋಬರ್ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ದೇಹಾರೋಗ್ಯದಲ್ಲಿ ಏರುಪೇರಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ಅಧಿಕ ಖರ್ಚು ವೆಚ್ಚಗಳಗಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಮನಸ್ಸಿನ ನೆಮ್ಮದಿಗಾಗಿ ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಕಿರುಕುಳ ಕಂಡುಬರುವುದು. ನಿಮ್ಮ ದುಃಖ ದುಮ್ಮಾನಗಳನ್ನು ಸಂಗಾತಿಯ ಜತೆ ಹಂಚಿಕೊಳ‍್ಳಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ನೆರವೇರಿಸಲು ಅಡೆತಡೆಗಳು ತೋರಿಬಂದೀತು. ತಾಳ್ಮೆ ಅಗತ್ಯ.

ಮಿಥುನ: ಇಂದು ನಿಮ್ಮ ಮಾತಿನಿಂದಲೇ ಮನಸ್ತಾಪವಾಗುವ ಸಾಧ‍್ಯತೆಯಿದೆ. ಹೀಗಾಗಿ ತಾಳ್ಮೆ, ಸಂಯಮ ಅಗತ್ಯ. ಅಪರಿಚಿತರೊಂದಿಗೆ ವ್ಯವಹರಿಸಲು ಹೋಗಬೇಡಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಆತುರದಲ್ಲಿ ಕೈಗೊಳ್ಳುವ ನಿರ್ಧಾರಗಳು ಫಲ ಕೊಡದು. ಹೊಸ ಯೋಜನೆಗಳಿಗೆ ಕೈ ಹಾಕುವ ಮೊದಲು ಹಿರಿಯರೊಂದಿಗೆ ಪರಾಮರ್ಶೆ ನಡೆಸಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬರಬಹುದು. ಕಿರು ಸಂಚಾರ ಮಾಡುವಿರಿ.

ಸಿಂಹ: ಇತರರನ್ನು ಮೆಚ್ಚಿಸಲು ಹೋಗಿ ಕಷ್ಟಕ್ಕೆ ಸಿಲುಕಲಿದ್ದೀರಿ. ಅನಗತ್ಯವಾಗಿ ಬೇರೆಯವರ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಹೊಳೆಯಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಪ್ರೀತಿ ಪಾತ್ರರ ಆರೋಗ್ಯ ನಿಮ್ಮನ್ನು ಚಿಂತೆಗೀಡು ಮಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನಕ್ಕೇರುವ ಅವಕಾಶ ಹಿತಶತ್ರುಗಳಿಂದ ತಪ್ಪಿಹೋಗಬಹುದು. ಆದರೆ ನಿರಾಸೆ ಬೇಡ. ಮಕ್ಕಳಿಂದ ಸಂತಸದ ವಾರ್ತೆ ಕೇಳಲಿದ್ದೀರಿ.

ತುಲಾ: ನಿಮ್ಮ ಮನಸ್ಸಿನ ಮಾತಿನಂತೆ ನಡೆದುಕೊಂಡರೆ ಅಂದುಕೊಂಡಿದ್ದನ್ನು ಸಾಧಿಸಬಹುದು. ಮಹಿಳೆಯರಿಗೆ ತವರಿನ ಸಂಬಂಧಿಗಳನ್ನು ಮರಳಿ ಭೇಟಿಯಾಗುವ ಯೋಗ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುವುದು.

ವೃಶ್ಚಿಕ: ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಾತು ಬಲ್ಲವನಿಗೆ ಜಗಳವಿಲ್ಲ ಎನ್ನುವ ಹಾಗೆ ನಾಜೂಕಾಗಿ ಮಾತನಾಡಿ ಕೆಲಸ ಸಾಧಿಸಿಕೊಳ್ಳಿ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಸಂತಾನ ಹೀನ ದಂಪತಿಗಳು ದೇವರ ಹರಕೆ ತೀರಿಸಲು ಮುಂದಾಗುವರು. ಹಿರಿಯರಿಗೆ ವಾತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಕಿರು ಓಡಾಟ ನಡೆಸುವಿರಿ.

ಮಕರ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಲಿದ್ದಾರೆ. ವಾಹನ ಸವಾರರಿಗೆ ಅಪಘಾತದ ಭಯವಿದೆ. ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಇಷ್ಟದೇವರ ಪ್ರಾರ್ಥನೆ ಮಾಡಿ.

ಕುಂಭ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಅವಿವಾಹಿತ ಕನ್ಯಾಮಣಿಗಳಿಗೆ ಶೀಘ್ರವೇ ಕಂಕಣ ಬಲ ಕೂಡಿಬರುವುದು. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ. ಕೃಷಿಕರಿಗೆ ಬೆಳೆ ನಷ್ಟ ಸಂಭವವಿದೆ.

ಮೀನ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲು ಮುಂದಾಗಲಿದ್ದೀರಿ. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments