ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 12 ಅಕ್ಟೋಬರ್ 2020 (09:03 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮಾಡುವ ಕೆಲಸದ ಮೇಲೆ ಏಕಾಗ್ರತೆ ವಹಿಸಲು ಕಷ್ಟವಾಗಬಹುದು. ಮನೆಯ ವಿಚಾರಗಳಿಗೆ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯುವುದು ಮುಖ್ಯ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಕ್ಕಾಗಿ ಹುಡುಕಾಟ ನಡೆಸಬೇಕಾಗುತ್ತದೆ.

ವೃಷಭ: ಎಷ್ಟೋ ದಿನಗಳಿಂದ ಮಾಡಬೇಕೆಂದಿದ್ದ ಕೆಲಸಗಳಿಗೆ ಇಂದು ಚಾಲನೆ ನೀಡುವಿರಿ. ಹೊಸ ವೃತ್ತಿ ಕಟ್ಟಿಕೊಳ್ಳುವವರಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಆರ್ಥಿಕವಾಗಿ ಲಾಭವಾಗಲಿದೆ. ಹೊಸದಾಗಿ ಪರಿಚಯವಾಗುವ ಗೆಳೆಯರಿಂದ ಹೊಸ ಯೋಚನೆ, ಯೋಜನೆಗಳನ್ನು ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಮಾಡುವ ಅವಕಾಶ ಲಭ್ಯವಾಗಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಹಿರಿಯರಿಗೆ ಸಾಧು ಸಂತರ ಭೇಟಿಯ ಯೋಗವಿದೆ. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗ ಹುಡುಕುವಿರಿ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯ ಭೀತಿ ಎದುರಾಗಲಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಆದರೆ ಅವರಿಗೆ ನಿಮ್ಮ ಅವಶ್ಯಕತೆಯ ಅರಿವಾಗಲಿದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಆಸ್ತಿ ಸಂಬಂಧವಾದ ವಿವಾದಗಳು ಬಗೆಹರಿಯಲಿವೆ. ಕಿರು ಸಂಚಾರ ಯೋಗವಿದೆ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ಹಣಕಾಸಿನ ಅಡಚಣೆಯಿಂದಾಗಿ ಅಡ್ಡಿ ಆತಂಕಗಳು ಎದುರಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಕಂಡುಕೊಳ್ಳಬಹುದು.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಹಿರಿಯರಿಂದ ಬಂದ ಬಳವಳಿಗಳನ್ನು ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಹೊಸ ವ್ಯವಹಾರ ಶುರು ಮಾಡಲು ಸಕಾಲ.

ಧನು: ನಿಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೊಳಿಸಲು ಸಕಾಲ. ನಾಟಕೀಯ ವರ್ತನೆ ತೋರುವವರ ಜತೆ ಎಚ್ಚರಿಕೆಯಿಂದ ವ್ಯವಹರಿಸಿ. ಸರಕಾರಿ ಕೆಲಸದಲ್ಲಿರುವವರಿಗೆ ಮುಂಬಡ್ತಿ ಯೋಗವಿದೆ. ಹಿರಿಯರ ಸಲಹೆಯನ್ನು ಪಾಲಿಸಿದರೆ ಉತ್ತಮ.

ಮಕರ: ಬರೀ ಯೋಜನೆಗಳನ್ನೇ ಹಾಕುತ್ತಿದ್ದರೇ ಪ್ರಯೋಜನವಾಗದು. ನಿಮ್ಮ ಪಾಲಿಗೆ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ.

ಕುಂಭ: ಆರ್ಥಿಕವಾಗಿ ಚೇತರಿಕೆ ಕಂಡುಬಂದು ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು. ಕ್ರಯ ವಿಕ್ರಯ ವ್ಯವಹಾರಗಳು ಲಾಭ ತಂದುಕೊಡಲಿವೆ. ಸಂಗಾತಿಗಾಗಿ ಚಿನ್ನಾಭರಣ ಖರೀದಿ ಮಾಡಲಿದ್ದೀರಿ.

ಮೀನ: ಸರಿಯಾದ ತಯಾರಿ ನಡೆಸಿ ಹೆಜ್ಜೆಯಿಡುವುದರಿಂದ ಗುರಿ ತಲುಪಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರ ವಿವಾಹ ಪ್ರಸ್ತಾಪಗಳು ಸ್ವಲ್ಪದರಲ್ಲೇ ಕೈ ತಪ್ಪಿಹೋಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments