Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 13 ಅಕ್ಟೋಬರ್ 2020 (09:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷದಿಂದ ಮನೆಯಲ್ಲಿ ಅಶಾಂತಿಯ ವಾತಾವರಣವಿರುವುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಬಿಡುವು ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಕೊಂಚ ಮುನ್ನಡೆ ಕಾಣಲಿದ್ದೀರಿ. ಇಷ್ಟು ದಿನ ನೀವು ಚಿಂತೆ ಮಾಡುತ್ತಿದ್ದ ವಿಚಾರಗಳಿಗೆ ಪರಿಹಾರ ಸಿಗಲಿದೆ. ಮನೆ ದೇವರ ಅನುಗ್ರಹ ನಿಮಗೆ ಸಿಗುವುದು. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಮಿಥುನ: ನೀವು ನಿರೀಕ್ಷಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆದುಹೋಗಲಿವೆ. ಸಂಗಾತಿಯ ಬಹುದಿನಗಳ ಮನದಾಸೆ ಪೂರೈಸಲಿದ್ದೀರಿ. ವ್ಯಾಪಾರಿಗಳಿಗೆ ಸ್ವಲ್ಪ ಮಟ್ಟಿಗೆ ಲಾಭವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ತಪ್ಪದು.

ಕರ್ಕಟಕ: ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಪಡೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಭವಿಷ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೃಷಿಕರಿಗೆ ಬೆಳೆ ನಷ್ಟದ ಭೀತಿ ಕಾಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಅನುಕೂಲಕರ ವಾತಾವರಣವಿರಲಿದೆ. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುವರೋ ಎನ್ನುವ ಚಿಂತೆ ಬಿಟ್ಟು ನಿಮ್ಮ ಕರ್ತವ್ಯದತ್ತ ಗಮನ ಕೊಡಿ. ನೆರೆಹೊರೆಯವರ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಶೈಕ್ಷಣಿಕ ರಂಗದಲ್ಲಿ ಮುನ್ನಡೆ ಪಡೆಯುವಿರಿ. ಪ್ರೀತಿ ಪಾತ್ರರ ಭೇಟಿ ಸಾಧ‍್ಯತೆ.

ತುಲಾ: ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ಬಂಧು ಮಿತ್ರರ ಭೇಟಿಯಾಗುವ ಸಾಧ‍್ಯತೆಯಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ತಾಳ್ಮೆಯಿಂದಿರಿ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಕೆಲವು ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ಅವಿವಾಹಿತರಿಗೆ ವಿವಾಹ ಮಾತುಕತೆಗಳು ಸ್ವಲ್ಪದರಲ್ಲೇ ತಪ್ಪಿ ಹೋಗಿ ಬೇಸರವಾಗಬಹುದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ.

ಧನು: ದೇಹಾರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ವಿದ್ಯಾರ್ಥಿಗಳು ಹೊಸ ಪರೀಕ್ಷೆಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಮಕರ: ವ್ಯಾಪಾರೀ ವರ್ಗದವರು ವ್ಯವಹಾರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಣುವರು. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕುಂಭ: ದೂರ ಸಂಚಾರದಲ್ಲಿ ವಿಘ್ನಗಳು ಎದುರಾಗಲಿವೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಕಾರ್ಯಸಾಧನೆಯಾಗಲಿದೆ.

ಮೀನ: ಹಿರಿಯರ ಮಾರ್ಗದರ್ಶನದಂತೆ ನಡೆದುಕೊಂಡರೆ ಶ್ರೇಯೋಭಿವೃದ್ಧಿ ಕಂಡುಬರುವುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸಲಿದ್ದೀರಿ. ನೂತನ ದಂಪತಿಗಳಿಗೆ ಮಧುರ ಕ್ಷಣ ಕಳೆಯುವ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ?