ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 18 ಅಕ್ಟೋಬರ್ 2020 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸಿಲ್ಲದೇ ಹೋದರೂ ಹೊಸ ಬದಲಾವಣೆಯನ್ನು ಒಪ್ಪಿಕೊಳ‍್ಳಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ದೇಹ ಹೈರಾಣಾದೀತು.

ವೃಷಭ: ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಯೋಚಿಸಿ ಕೈ ಹಾಕುವುದು ಒಳಿತು. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಭರವಸೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಬೆಳವಣಿಗೆಗೆ ಪೂರಕವಾದ ವಾತಾವರಣ ಕಂಡುಬರಲಿದೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆಯೇ ಉತ್ತಮ. ಸರಕಾರಿ ಕೆಲಸದವರಿಗೆ ಬಿಡುವಿನ ಖುಷಿ ಸಿಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕರ್ಕಟಕ: ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಸಿಂಹ: ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ ಸಂಭವವಿದ್ದು, ಮನಸ್ಸಿಗೆ ಖುಷಿಯಾಗಲಿದೆ. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕನ್ಯಾ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹಣ ವ್ಯಯಿಸಲಿದ್ದೀರಿ.

ತುಲಾ: ಜೀವನದಲ್ಲಿ ಅತಿ ಉತ್ಸುಕತೆಯೂ ಕೆಲವೊಮ್ಮೆ ತೊಂದರೆಯುಂಟು ಮಾಡೀತು. ಸರಿಯಾಗಿ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಘಟನೆಗಳು ನಡೆದೀತು. ತಾಳ್ಮೆಯಿಂದಿರಿ.

ವೃಶ್ಚಿಕ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ. ಭವಿಷ್ಯದ ದೃಷ್ಟಿಯಿಂದ ಹಣ ಕೂಡಿಡುವಿರಿ. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ. ದೇವತಾ ಪ್ರಾರ್ಥನೆ ಮಾಡಿ.

ಧನು: ಕಷ್ಟಗಳು ಬಂದಾಗ ಸಿಂಹದಂತೆ ಗಟ್ಟಿಯಾಗಿ ನಿಂತು ಹೋರಾಡುವಿರಿ. ಆದರೆ ನಿಮ್ಮ ಕೆಲವೊಂದು ನಿರ್ಧಾರಗಳು ಬೇರೆಯವರಿಗೆ ಇಷ್ಟವಾಗದೇ ಹೋದೀತು. ಕಾರ್ಯನಿಮಿತ್ತ ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ.

ಮಕರ: ಯಾವುದೇ ವಿಚಾರಗಳನ್ನೂ ವಿವೇಚನೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಮನೆಯಲ್ಲಿ ಹಿರಿಯರೊಡನೆ ಸಂಯಮದಿಂದ ವರ್ತಿಸಿ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾದೀತು, ಕಾಳಜಿವಹಿಸಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕುಂಭ: ಇಷ್ಟ ಮಿತ್ರರೊಂದಿಗೆ ಭೋಜನ, ಪ್ರವಾಸ ಯೋಗವಿದೆ. ಮನಸ್ಸು ಪ್ರಫುಲ್ಲವಾಗಿರುತ್ತದೆ. ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಮೀನ: ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡರೆ ಯಾವುದೇ ತೊಂದರೆಯಾಗದು. ಗುರು ಹಿರಿಯರಲ್ಲಿ ಗೌರವವು ಹೆಚ್ಚಾಗಲಿದೆ. ನಿಮ್ಮ ಟೀಕೆ ಮಾಡುವವರನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments