Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 21 ಅಕ್ಟೋಬರ್ 2020 (09:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕವಾಗಿ ನೀವು ಕೈಗೊಳ್ಳುವ ಕೆಲಸಗಳು ಪ್ರಶಂಸೆಗೆ ಕಾರಣವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ಸಂಘರ್ಷ ಬೇಡ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಯೋಚನೆ ಮಾಡುವಿರಿ.

ವೃಷಭ: ಯಾವುದೇ ವಿಚಾರವಾದರೂ ಅನಗತ್ಯ ಚಿಂತೆ ಮಾಡುವುದನ್ನು ಬಿಡಿ. ಸಾವಧಾನದಿಂದ ಯೋಚಿಸಿದಲ್ಲಿ ಮಾರ್ಗಗಳು ಗೋಚರವಾಗಲಿದೆ. ಆರ್ಥಿಕವಾಗಿ ಧನಗಳಿಕೆಯ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮ ಪ್ರೀತಿ ಪಾತ್ರರ ಮನಸ್ಸಿಗೆ ಸಂತಸ ನೀಡಲಿದ್ದೀರಿ. ಹೊಸ ಜಾಗಗಳಿಗೆ ಭೇಟಿ ನೀಡುವ ಸಾಧ‍್ಯತೆಯಿದೆ. ನಿಮಗನಿಸಿದ್ದನ್ನು ನೇರವಾಗಿ ಹೇಳುವುದು ಉತ್ತಮ. ಹೊಸ ಮಿತ್ರರ ಸಂಪಾದಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಸಾಕಷ್ಟು ಯೋಚಿಸಿ ಮುನ್ನಡೆಯಿರಿ. ವೃತ್ತಿರಂಗದಲ್ಲಿ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಕೃಷಿಕರಿಗೆ ಬೆಳೆ ನಷ್ಟದ ಭೀತಿ ಎದುರಾಗಲಿದೆ. ಆರೋಗ್ಯದಲ್ಲಿ ಕೊಂಚ ಸುಧಾರಣೆಯಾಗಲಿದೆ.

ಸಿಂಹ: ಇತರರ ಕಷ್ಟಗಳಿಗೆ ನಿಮ್ಮ ಮನಸ್ಸು ಬೇಗನೇ ಕರಗುವುದು. ಆದರೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಹಿರಿಯರು ಸಕಾಲದಲ್ಲಿ ನೀಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಚಿತ್ತ ಚಾಂಚಲ್ಯ ಕಾಡಲಿದೆ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡಬಹುದು. ವೃತ್ತಿರಂಗದಲ್ಲಿ ಉದ್ವೇಗಕ್ಕೊಳಗಾಗುವ ಸಾಧ‍್ಯತೆಯಿದೆ. ಹಳೆಯ ಮಿತ್ರರ ಭೇಟಿ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ತುಲಾ: ಒಳಗಿನ ಬೇಗುದಿ ಹೊರಗೆ ತೋರಿಸಿಕೊಳ್ಳಲ್ಲ. ಕಷ್ಟಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ ಕೊಂಚ ಹಗುರವಾಗುವಿರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಇಷ್ಟ ಮಿತ್ರರೊಂದಿಗೆ ಭೋಜನ ಯೋಗವಿದೆ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ತಾಳ್ಮೆಯಿಂದಿರಿ.

ಧನು: ಕೆಲವೊಮ್ಮೆ ಅತಿಯಾದ ವಿಶ್ವಾಸವೂ ಒಳ್ಳೆಯದಲ್ಲ ಎನ್ನುವುದನ್ನು ಮನಗಾಣಲಿದ್ದೀರಿ. ಮಹಿಳೆಯರಿಗೆ ತವರಿನ ಸಂಬಂಧಿಗಳನ್ನು ಭೇಟಿಯಾಗುವ ಯೋಗವಿದೆ. ವ್ಯವಹಾರದಲ್ಲಿ ತಾಳ್ಮೆಯೇ ಮುಖ್ಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರುವುದು ಅಗತ್ಯ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ನಿಮ್ಮ ಅತಿಯಾದ ಪರಿಶ್ರಮವೇ ನಿಮಗೆ ಮುಂದೆ ಯಶಸ್ಸು ತಂದುಕೊಡಲಿದೆ. ನೀವು ಅಂದುಕೊಂಡಿದ್ದನ್ನು ಸಾಧಿಸಿದ ತೃಪ್ತಿ ಸಿಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕೊಂಚ ಚಿಂತೆಯಾಗಬಹುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಮೀನ: ಮಹಿಳೆಯರಿಗೆ ಆಕಸ್ಮಿಕ ಧನಲಾಭದ ಯೋಗವಿದೆ. ಜೀವನದಲ್ಲಿ ಬಂದಿದ್ದನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿ. ನೂತನ ದಂಪತಿಗಳಿಗೆ ಶೀಘ‍್ರದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ?