Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 22 ಅಕ್ಟೋಬರ್ 2020 (09:17 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಾನಸಿಕ ಒತ್ತಡಗಳು ಕಂಡುಬರಲಿದೆ. ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಗೊಂದಲ ಕಾಡಲಿದೆ. ಸಂಗಾತಿಯ ಸಲಹೆಗಳನ್ನು ಪರಿಗಣಿಸಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.

ವೃಷಭ: ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಹಿಡಿತವಿಟ್ಟುಕೊಳ್ಳುವುದು ಅಗತ್ಯ. ಭವಿಷ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು.

ಮಿಥುನ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಅಂದುಕೊಂಡ ಕೆಲಸಗಳಿಗೆ ಅಡ್ಡಿ ಆತಂಕಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕೃಷಿಕರಿಗೆ ಬೆಳೆ ನಷ್ಟದ ಭೀತಿಯಿದೆ.

ಕರ್ಕಟಕ: ಕೈಗೆ ಬಂದಿದ್ದು ಬಾಯಿಗೆ ಬರಲಿಲ್ಲ ಎಂಬ ಸ್ಥಿತಿ ನಿಮ್ಮದಾಗಲಿದೆ. ಇತರರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋದರೆ ಅಪವಾದ ಬಂದೀತು. ಮಹಿಳೆಯಿರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ರಾಜಕೀಯ ವರ್ಗದವರಿಗೆ ಮುನ್ನಡೆಗೆ ವಿಘ್ನಗಳು ಎದುರಾದೀತು. ನೀವು ನಂಬಿದ್ದವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಕುಟುಂಬ ಸದಸ್ಯರೊಡನೆ ಯಾತ್ರೆ ಕೈಗೊಳ್ಳಲಿದ್ದೀರಿ. ಇತರರ ಕೆಲಸಗಳಿಗಾಗಿ ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡಬೇಡಿ.

ಕನ್ಯಾ: ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ನಿಮ್ಮ ಅಸಹಾಯಕತೆ ಬಗ್ಗೆ ನಿಮಗೇ ಬೇಸರವಾದೀತು. ಸಂಗಾತಿಯಿಂದ ಸಾಂತ್ವನ ಸಿಗಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಸಂತಸವುಂಟು ಮಾಡಲಿದೆ.

ತುಲಾ: ನಿಮ್ಮ ಮನಸ್ಸಿನ ಬೇಸರವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕತೆಯಿಂದ ಯೋಚಿಸಿ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.

ವೃಶ್ಚಿಕ: ಎಲ್ಲವೂ ನೀವಂದುಕೊಂಡಂತೆಯೇ ಕೆಲಸಗಳು ಸಾಗುವುದರಿಂದ ಮನಸ್ಸಿಗೆ ಸಂತಸವಾಗಲಿದೆ. ಸರಕಾರಿ ಕೆಲಸಗಾರರಿಗೆ ಕೆಲಸದೊತ್ತಡವಿರುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಲಭಿಸಲಿದೆ. ಚಿಂತೆ ಬೇಡ.

ಧನು: ದೈವಾನುಕೂಲದಿಂದ ಬಹಳ ದಿನಗಳಿಂದ ನೀವು ಆಸೆ ಪಡುತ್ತಿದ್ದ ವಸ್ತು, ವ್ಯಕ್ತಿಗಳು ನಿಮ್ಮ ಬಳಿಗೆ ಬರಲಿದ್ದಾರೆ. ನೆರೆಹೊರೆಯವರ ಮಾತಿಗೆ ಕಿವಿಗೊಡಬೇಡಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ.

ಮಕರ: ನೂತನ ದಂಪತಿಗಳಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ವಿರೋಧ ಎದುರಿಸುವ ಸಂಕಟವಾಗುವುದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಅಸಹಕಾರ ಮನಸ್ಸಿಗೆ ಬೇಸರವುಂಟು ಮಾಡೀತು. ತಾಳ್ಮೆಯಿರಲಿ.

ಕುಂಭ: ನಿಮ್ಮದಲ್ಲದ ವಸ್ತುಗಳ ಬಗ್ಗೆ ವ್ಯಾಮೋಹ ಬೇಡ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಕಂಡುಕೊಳ್ಳಲಿದ್ದಾರೆ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡುವಿರಿ.

ಮೀನ: ಕೆಲಸ ಕಾರ್ಯಗಳಲ್ಲಿ ಒಂದು ರೀತಿಯ ನಿರುತ್ಸಾಹ ಕಂಡುಬಂದೀತು. ಸ್ವಯಂ ವ್ಯಾಪಾರಿಗಳು, ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ?