Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 23 ಅಕ್ಟೋಬರ್ 2020 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಶಿಸ್ತಿನ ಜೀವನವೇ ನಿಮ್ಮ ಪಾಲಿಗೆ ವರವಾಗಲಿದೆ. ಆದರೆ ಬೇರೆಯವರಿಂದ ಅನಗತ್ಯವಾಗಿ ಅಪವಾದ, ಚಾಡಿ ಮಾತು ಕೇಳಿಬಂದೀತು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳಬೇಡಿ. ಆರ್ಥಿಕವಾಗಿ ಸಾಕಷ್ಟು ಯೋಜನೆಗಳು ನಿಮ್ಮ ತಲೆಗೆ ಹೊಳೆಯಲಿವೆ.

ವೃಷಭ: ರಾಜಕೀಯ ವ್ಯಕ್ತಿಗಳಿಗೆ ಸ್ಥಾನ ಮಾನ ಬದಲಾವಣೆ ಸಾಧ‍್ಯತೆಯಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಕೃಷಿಕರಿಗೆ ವ್ಯವಹಾರದಲ್ಲಿ ನಷ್ಟದ ಭೀತಿಯಿದೆ. ಹಿರಿಯರು ಕೊಡುವ ಸಲಹೆಗಳು ಉಪಯೋಗಕ್ಕೆ ಬರಲಿವೆ.

ಮಿಥುನ: ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎನ್ನುವುದನ್ನು ಮರೆಯದಿರಿ. ಯಾರೋ ಹೇಳಿದ ಅಭಿಪ್ರಾಯಕ್ಕೆ ಜೋತುಬೀಳಬೇಡಿ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಸಿಂಹ: ವ್ಯವಹಾರ ಕ್ಷೇತ್ರದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನಿಧಾನವಾಗಿ ಚೇತರಿಕೆ ಕಂಡುಬರಲಿದೆ. ಆರ್ಥಿಕವಾಗಿ ಲಾಭ ಕಂಡುಬರುವುದು. ದೇಹಾರೋಗ್ಯದಲ್ಲಿ ಕೊಂಚ ಏರುಪೇರಾದೀತು. ಕಾಳಜಿ ಮಾಡುವುದು ಅಗತ್ಯ.

ಕನ್ಯಾ: ನಿಮ್ಮ ಮನಸ್ಸಿನ ಗೊಂದಲಗಳಿಗೆ ತೆರೆ ಎಳೆಯಲಿದ್ದೀರಿ. ಸಂಗಾತಿಯ ಸಾಂತ್ವನ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ಹಿರಿಯರಿಗೆ ಆಧ‍್ಯಾತ್ಮಿಕ ವಿಚಾರಗಳಲ್ಲಿ ಆಸಕ್ತಿ ಮೂಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಆರ್ಥಿಕವಾಗಿ ಉತ್ತಮ ಅಭಿವೃದ್ಧಿ ತೋರಿಬಂದರೂ ಭವಿಷ್ಯದ ದೃಷ್ಟಿಯಿಂದ ಖರ್ಚು ವೆಚ್ಚಗಳಿಗೆ ಇತಿಮಿತಿ ಹಾಕುವುದು ಉತ್ತಮ. ಅನಿವಾರ್ಯ ಕಾರಣಗಳಿಗೆ ಪ್ರಯಾಣ ಮಾಡಬೇಕಾಗುತ್ತದೆ. ವಾಹನ ಸವಾರರಿಗೆ ಅಪಘಾತದ ಭಯವಿದೆ, ಎಚ್ಚರಿಕೆಯಿರಲಿ.

ವೃಶ್ಚಿಕ: ಆರ್ಥಿಕವಾಗಿ ಹೆಚ್ಚಿನ ಪ್ರಗತಿ ನಿರೀಕ್ಷಿಸಬಹುದು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಕೊಂಚ ಎಚ್ಚರಿಕೆ ವಹಿಸಬೇಕಾಗುತ್ತದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗವಿದೆ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ತಾಳ್ಮೆ, ಸಂಯಮವಿರಲಿ.

ಮಕರ: ಉದ್ಯೋಗ ವ್ಯವಹಾರದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ತಾಳ್ಮೆ ಪರೀಕ್ಷೆ ನಡೆಯಲಿದೆ.

ಕುಂಭ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಯೋಚಿಸಲಿದ್ದೀರಿ. ಮಾನಸಿಕವಾಗಿ ಉದ್ವೇಗಕ್ಕೊಳಗಾಗಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ತಟಸ್ಥ ಧೋರಣೆಯಿಂದ ಇದ್ದಲ್ಲಿ ಉತ್ತಮ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಮೀನ: ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಕೀರ್ತಿ ಪ್ರತಿಷ್ಠೆ ಸ್ಥಾನಮಾನಗಳು ತಾವಾಗಿಯೇ ಒಲಿದುಬರಲಿವೆ. ಚಿಂತೆ ಬೇಡ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ವಾಹನ ಸವಾರರು ಎಚ್ಚರಿಕೆಯಿಂದಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ನವರಾತ್ರಿಯಂದು ಈ ವಸ್ತುಗಳು ನಿಮಗೆ ಕಾಣಿಸಿದರೆ ಅದೃಷ್ಟ ಒಲಿದುಬರಲಿದೆ