Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 26 ಅಕ್ಟೋಬರ್ 2020 (09:23 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಏಕತಾನತೆಯಿಂದ ಮನಸ್ಸಿಗೆ ಬೇಸರ, ನಿರುತ್ಸಾಹವುಂಟಾಗಲಿದೆ. ಮಹಿಳೆಯರಿಗೆ ಅತಿಥಿಗಳ ಉಪಾಚಾರ ಮಾಡುವ ಗಡಿಬಿಡಿಯಿರುತ್ತದೆ. ಹಿರಿಯರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಬಿಡುವಿಲ್ಲದ ಕೆಲಸದಿಂದ ಕೊಂಚ ವಿಶ್ರಾಂತಿ ಪಡೆಯಲು ಮನಸ್ಸು ಬಯಸುವುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ನಿಮ್ಮ ಇಷ್ಟ ಮಿತ್ರರನ್ನು ಅನಿರೀಕ್ಷಿತವಾಗಿ ಭೇಟಿಯಾದ ಸಂತೋಷ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು ಆದರೆ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬರುವುದು. ತಾಳ್ಮೆ, ಸಂಯಮದಿಂದ ಮುನ್ನಡೆಯಿರಿ. ಕಷ್ಟದ ಸಮಯದಲ್ಲಿ ನೆರೆಹೊರೆಯವರ ಸಹಾಯ ಸಿಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ.

ಸಿಂಹ: ನಿಮ್ಮ ಕಷ್ಟಗಳೆಲ್ಲವೂ ದೂರವಾಗುವ ಸಮಯ ಹತ್ತಿರದಲ್ಲೇ ಇದೆ. ಆಶಾಭಾವನೆ ಕಳೆದುಕೊಳ್ಳಬೇಡಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಐಡಿಯಾಗಳು ಹೊಳೆಯಲವೆ. ಹಿರಿಯರ ಸಲಹೆಗಳನ್ನು ಪಾಲಿಸಿ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸುವಿರಿ. ಹಿರಿಯರ ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ತುಲಾ: ಉದ್ಯೋಗ, ವ್ಯವಹಾರದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ಆಪ್ತ ಮಿತ್ರರೊಂದಿಗೆ ನಿಮ್ಮ ಸಂಕಷ್ಟಗಳನ್ನು ಹಂಚಿಕೊಳ್ಳಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಕೊಂಚ ಚೇತರಿಕೆ ಕಂಡುಬರಲಿದೆ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರುವುದು. ನಿರೀಕ್ಷಿತ ಕೆಲಸಗಳಲ್ಲಿ ಮುನ್ನಡೆ ಸಿಗಬೇಕಾದರೆ ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ತಾಳ್ಮೆ, ಸಂಯಮವಿರಲಿ.

ಧನು: ಉದ್ವೇಗಕ್ಕೊಳಗಾಗಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನಿಮ್ಮ ವಿರೋಧಿಗಳ ಸಂಚು ಬಯಲಿಗೆ ಬರಲಿದೆ. ಮಹಿಳೆಯರಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಲಿದೆ.

ಮಕರ: ಇದುವರೆಗೆ ನಿಮಗಿದ್ದ ಕಷ್ಟಗಳು ದೂರವಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಎದುರಾಗಲಿದ್ದು, ಆಪ್ತರ ಸಹಾಯ ಯಾಚಿಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾದೀತು. ಪ್ರೀತಿ ಪಾತ್ರರ ಭೇಟಿ ಸಾಧ್ಯತೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಬಯಸಲಿದೆ. ಆದರೆ ಬಯಸಿದಂತೆ ಎಲ್ಲವೂ ನಡೆಯದೇ ಹೋದಾಗ ನಿರಾಸೆಯಾದೀತು. ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಬಂಧು ಮಿತ್ರರ ಆಗಮನ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಆಸ್ತಿ, ವಾಹನ ಖರೀದಿ ಯೋಚನೆ ಮನಸ್ಸಿಗೆ ಬರಲಿದೆ. ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments