ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 30 ಅಕ್ಟೋಬರ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಭಾವನೆಗಳು ನಿಮ್ಮ ನಿಯಂತ್ರಣದಲ್ಲಿರಲಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕೌಟುಂಬಿಕ ಸಮಸ್ಯೆಗಳಿಂದಾಗಿ ಮನಸ್ಸಿಗೆ ಕಿರಿ ಕಿರಿಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಕಷ್ಟ ನಷ್ಟಗಳು ಸಾಮಾನ್ಯ. ಹಲವು ಸಮಯದಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಹುಡುಕಲಿದ್ಧೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಿರಿಯರಿಗೆ ಮನಸ್ಸಿಗೆ ಒಂದು ರೀತಿಯ ಬೇಸರ ಕಾಡಲಿದೆ. ಸಾರ್ವಜನಿಕ ವಲಯದಲ್ಲಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಕೌಟುಂಬಿಕವಾಗಿ ಪತ್ನಿ-ಮಕ್ಕಳಿಂದ ಸಂತೋಷ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಮನೋಭಿಲಾಷೆಗಳು ಪೂರೈಕೆಯಾಗಲಿವೆ. ಶತ್ರು ಪೀಡೆಯಿಂದ ಮುಕ್ತಿ ಕಾಣಲಿದ್ದೀರಿ. ಯಾವುದೇ ಕೆಲಸವಾದರೂ ಇಷ್ಟಪಟ್ಟು ಮಾಡಿದರೆ ಯಶಸ್ಸು ಶತಸಿದ್ಧ. ವಿವಾಹಾದಿ ಸಂಬಂಧಗಳು ಯಶಸ್ವಿಯಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಆರಾಮದಾಯಕ ದಿನಗಳನ್ನು ಕಳೆಯಬೇಕೆಂದು ಮನಸ್ಸಿನಲ್ಲಿ ಅಂದುಕೊಂಡರೂ ನೆರವೇರದು. ನಿಮ್ಮ ಮನಸ್ಸಿನ ಭಾರ ಇಳಿಸಿಕೊಳ್ಳಲಿದ್ದೀರಿ. ಸಂಗಾತಿಯ ಸಾಂತ್ವನ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಸಾಧನೆಗೆ ಅನುಕೂಲಕರವಾದ ವಾತಾವರಣ ಕಂಡುಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ. ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಶ್ಚಿಕ: ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ ಕಂಡುಬರಲಿದೆ. ನಿಮ್ಮ ಮನಸ್ಸಿಗೆ ಸಮಾಧಾನ ಕೊಡುವ ಕೆಲಸ ಮಾಡಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾದೀತು.

ಧನು: ನಿಮ್ಮ ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ತೋರುವುದರಿಂದ ಬೇರೆಯವರಿಗೆ ತೊಂದರೆಯಾದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದ ಕಡೆಗೆ ಗಮನ ಕೊಡುವುದು ಮುಖ್ಯವಾಗುತ್ತದೆ. ಆರ್ಥಿಕವಾಗಿ ಖರ್ಚುವೆಚ್ಚಗಳಿಗೆ ಸಿದ್ಧರಾಗಿ.

ಮಕರ: ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನದಿಂದ ಸಂತಸದ ವಾತಾವರಣವುಂಟಾಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ಸಂತೋಷ ಪಡೆಯುವರು. ಗೃಹಿಣಿಯರಿಗೆ ಬಿಡುವಿಲ್ಲದ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು.

ಕುಂಭ: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಜತೆಯಾಗಿ ಕಳೆಯುವ ಯೋಗ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯ ಭಯ ಕಾಡಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments