Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 31 ಅಕ್ಟೋಬರ್ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿರುದ್ಯೋಗಿಗಳಿಗೆ ನಿರೀಕ್ಷಿಸಿದ ಉದ್ಯೋಗಕ್ಕೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡಂತೆ ನಡೆಯುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮ ಮೇಲಿನ ಅತಿಯಾದ ನಿರೀಕ್ಷೆಗಳು ನಿಮಗೆ ಭಾರವೆನಿಸೀತು. ನಿಮ್ಮ ಮನಸ್ಸಿಗೆ ಅನಿಸಿದ್ದನ್ನು ಮಾಡುತ್ತಾ ಸಾಗಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶದಿಂದ ಸಂತಸ ಸಿಗುವುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಮಿಥುನ: ನಿಮ್ಮ ಕಾರ್ಯಸಾಧನೆಗಾಗಿ ಬಹಳ ಜನರ ಭೇಟಿ, ಒಡನಾಟ ನಡೆಸಲಿದ್ದೀರಿ. ಹಿರಿಯರಿಗೆ ವಾತಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ನಿಮ್ಮ ಸ್ವ ಪ್ರಯತ್ನಕ್ಕೆ ಯಶಸ್ಸು ಸಿಗಲಿದೆ. ದಾಯಾದಿ ಕಲಹಗಳು ದೂರವಾಗಲಿದೆ.

ಕರ್ಕಟಕ: ನಿಮ್ಮ ಮನಸ್ಸಿನ ಭಾವನೆಗಳನ್ನು ಬಲವಂತವಾಗಿ ಅದುಮಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಬರಲಿದೆ. ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೋಗಿ ಕೈ ಸುಟ್ಟುಕೊಳ್ಳಬೇಡಿ. ಅವಿವಾಹಿತರಿಗೆ ತಮ್ಮ ಜೀವನ ಸಂಗಾತಿಯ ಭೇಟಿಯಾಗುವ ಯೋಗ.

ಸಿಂಹ: ನಿಮ್ಮ ಯಶಸ್ಸನ್ನು ನೋಡಿ ಸಹೋದ್ಯೋಗಿಗಳೂ ಅಸೂಯೆಪಡುವ ಸ್ಥಿತಿ ಎದುರಾಗಬಹುದು. ತಾಳ್ಮೆ, ಸಂಯಮದಿಂದ ನಿಭಾಯಿಸಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಸ್ವಯಂ ವ್ಯಾಪಾರ, ಉದ್ಯೋಗದಲ್ಲಿರುವವರಿಗೆ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ ಮುನ್ನಡೆಯಿರಿ.

ತುಲಾ: ನೂತನ ದಂಪತಿಗಳಿಗೆ ಶೀಘ್ರವೇ ಸಂತಾನ ಫಲ ಸೂಚನೆ ದೊರೆಯುವುದು. ಇಷ್ಟ ಮಿತ್ರರ ಭೇಟಿ, ಭೋಜನ ಯೋಗವಿದೆ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ವೃಶ್ಚಿಕ: ಮಿತ್ರರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ನಿಮ್ಮ ಹೂಡಿಕೆ ವ್ಯವಹಾರಗಳು ಫಲ ಕೊಡಲಿವೆ. ಯೋಗ್ಯ ವಯಸ್ಕರಿಗೆ ವಿವಾಹ ಮಾತುಕತೆಗಳು ಅರ್ಧಕ್ಕೇ ನಿಲ್ಲಲಿವೆ. ನಿರಾಸೆ ಬೇಡ. ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ ಸಿಗಲಿದೆ.

ಧನು: ಅಧಿಕಾರಿ ವರ್ಗದವರಿಗೆ ಭತ್ಯೆ ಹೆಚ್ಚಳ ಯೋಗವಿದೆ. ಮಹಿಳೆಯರಿಗೆ ತವರಿನ ಕಡೆಯಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ. ನಿರುದ್ಯೋಗಿಗಳಿಗೆ ಇಷ್ಟು ದಿನ ಕಾಯುತ್ತಿದ್ದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ದೈನಂದಿನ ಬದುಕಿನಲ್ಲಿ ಕೆಲವು ಅನಿರೀಕ್ಷಿತ ಬದಲಾವಣೆಗಳಾದೀತು. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಬೇಟಿಯಾಗಲಿದ್ದೀರಿ. ಕಳೆದುಕೊಂಡಿದ್ದ ವಸ್ತುಗಳು ಮರಳಿ ಕೈ ಸೇರಲಿವೆ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಕುಂಭ: ಮಾನಸಿಕವಾಗಿ ಗಟ್ಟಿಯಾಗಬೇಕಾದ ದಿನವಿದು. ಕೆಲವು ಆಘಾತಕಾರೀ ಸುದ್ದಿ ಕೇಳಿಬಂದೀತು. ಆದರೆ ಧೃತಿಗೆಡಬೇಡಿ. ಸಂಗಾತಿಯ ಸಾಂತ್ವನ ಸಿಗಲಿದೆ. ನಿಮ್ಮ ಸ್ವಪ್ರಯತ್ನಕ್ಕೆ ಉತ್ತಮ ಬೆಲೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ನಿಮ್ಮ ನಡುವಳಿಕೆಗಳಿಂದಲೇ ಜನರ ಪ್ರೀತ್ಯಾದರಗಳಿಗೆ ಕಾರಣವಾಗುವಿರಿ. ಕ್ರಿಯಾಶೀಲತೆಯಿಂದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಿದ್ದೀರಿ. ಮಕ್ಕಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿಗೆ ಅವಕಾಶಗಳಿವೆ. ಇಷ್ಟದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments