Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 4 ನವೆಂಬರ್ 2020 (09:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ಧೀರಿ. ನಿಮ್ಮ ಕ್ರಿಯಾಶೀಲತೆಗೆ ಪ್ರಶಂಸೆ ವ್ಯಕ್ತವಾಗಲಿದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಆದರೆ ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ತಾಳ್ಮೆಯಿರಲಿ.

ವೃಷಭ: ಉದ್ಯೋಗ ರಂಗದಲ್ಲಿ ನಿಮ್ಮ ಹಿತ ಶತ್ರುಗಳ ಕೂಟ ಬೆಳಕಿಗೆ ಬರಲಿದೆ. ಯಾವುದೇ ವಿಚಾರವಾದರೂ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಕಳೆದು ಹೋದ ವಸ್ತುಗಳನ್ನು ಮರಳಿ ಪಡೆಯಲು ಪ್ರಯತ್ನಿಸುವಿರಿ.

ಮಿಥುನ: ಆರ್ಥಿಕ ವಿಚಾರದಲ್ಲಿ ಏಳಿಗೆ ಕಂಡುಬರಲಿದ್ದು, ನಿಮ್ಮ ಕಾರ್ಯಾನುಕೂಲಕ್ಕೆ ಯಾವುದೇ ಅಡ್ಡಿಯಾಗದು. ಸಾಂಸಾರಿಕವಾಗಿ ಯಾವುದೇ ನಿರ್ಧಾರ ಕೈಗೊಳ್ಳುವಾಗ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ.

ಕರ್ಕಟಕ: ಸಾಂಸಾರಿಕವಾಗಿ ಹಿರಿಯರ ಸಲಹೆ ಸೂಚನೆ ಪಾಲಿಸಬೇಕಾಗುತ್ತದೆ. ದಾಯಾದಿ ಕಲಹಗಳು ಪರಿಹಾರವಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಕಾರ್ಯದೊತ್ತಡ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಸಿಂಹ: ಬೇರೆಯವರ ಆಲೋಚನೆಗಳನ್ನು ನಿಮ್ಮ ಮೇಲೆ ಹೇರಿಕೊಳ್ಳಬೇಡಿ. ನಿಮಗೆ ಅನಿಸಿದ್ದನ್ನು ಮಾಡುತ್ತಿರಿ. ವೃತ್ತಿರಂಗದಲ್ಲಿ ಸದವಕಾಶಗಳು ಬಂದಾಗ ಬಾಚಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರವಾಗಿ ಯಾವುದೇ ತೊಂದರೆಯಿರದು. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಮಾನಸಿಕ ನೆಮ್ಮದಿಗಾಗಿ ದೇವರ ಪ್ರಾರ್ಥನೆ ಮಾಡಿ.

ತುಲಾ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಅನಿರೀಕ್ಷಿತ ರೂಪದಲ್ಲಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ಪೂರ್ತಿ ಮಾಡಲಿದ್ದೀರಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ.

ವೃಶ್ಚಿಕ: ಮನಸ್ಸಿಗೆ ಹಿಡಿಸಿದವರ ಜತೆ ಸುಂದರ ಕ್ಷಣ ಕಳೆಯಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ಅವಿವಾಹಿತ ಕನ್ಯಾಮಣಿಗಳಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ದಿನದಂತ್ಯಕ್ಕೆ ಶುಭ ಸುದ್ದಿ.

ಧನು: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಲಿದೆ. ವಾರಂತ್ಯದಲ್ಲಿ ಹೊಸ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆಸಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕೊಂಚ ಕಡಿವಾಣ ಅಗತ್ಯ.

ಮಕರ: ವಿಪರೀತ ಕಾರ್ಯದೊತ್ತಡದಿಂದಾಗಿ ದೇಹಾಯಾಸವಾದೀತು. ನಿಮ್ಮ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ರಾಜಕೀಯ  ವರ್ಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ ಹೆಚ್ಚಲಿದೆ. ಮಿತ್ರ ವರ್ಗದವರ ಸಹಕಾರ ಸಿಗಲಿದೆ.

ಕುಂಭ: ವೃತ್ತಿರಂಗದಲ್ಲಿ ನಿಮ್ಮ ಜವಾಬ್ಧಾರಿಯುತ ನಡೆ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಕಂಡುಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಕಾರ್ಯರಂಗದಲ್ಲಿ ಮುನ್ನಡೆ ತೋರಿಬರಲಿದೆ.

ಮೀನ: ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಕೊರತೆ ಉಂಟಾಗಬಹುದು. ನಿಮ್ಮ ಪ್ರತೀ ಮಾತಿನ ಮೇಲೂ ನಿಗಾ ಇರಲಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು. ವ್ಯಾಪಾರೀ ವರ್ಗದವರಿಗೆ ಲಾಭ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments