Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 8 ನವೆಂಬರ್ 2020 (09:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಕೌಟುಂಬಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಾಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಅತಿಯಾದ ಕಾರ್ಯದೊತ್ತಡ ನಿಮ್ಮನ್ನು ಹೈರಾಣಾಗಿಸಲಿದೆ. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ‍್ಳಿ.

ವೃಷಭ: ಯಾರದೋ ತಪ್ಪಿಗೆ ನೀವು ಬೆಲೆ ತೆರಬೇಕಾದ ಸಂದರ್ಭ ಎದುರಾದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ನೆಮ್ಮದಿ ಕಂಡುಬಂದೀತು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಬರಲಿವೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಅಡ್ಡಗಾಲು ಹಾಕುವವರನ್ನು ನಿರ್ಲಕ್ಷಿಸಿ ಮುಂದುವರಿಯುವುದೇ ಉತ್ತಮ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹೊಸ ವಸ್ತುಗಳ ಖರೀದಿ ಮಾಡುವಿರಿ.

ಕರ್ಕಟಕ: ಮನೆಯಲ್ಲಿ ಸ್ತ್ರೀ ಸದಸ್ಯರ ನಡುವಿನ ಸಾಮರಸ್ಯದ ಕೊರತೆಯಿಂದ ಭಿನ್ನಾಭಿಪ್ರಾಯಗಳು ಕಂಡುಬಂದೀತು. ತಾಳ್ಮೆ, ಸಂಯಮದಿಂದ ವರ್ತಿಸುವುದು ಅಗತ್ಯ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಹೆಚ್ಚಿನ ಧನಾಗಮನಕ್ಕಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಸದ್ಯದಲ್ಲೇ ರಾಜಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿದೆ.

ಕನ್ಯಾ: ಸುಖ-ದುಃಖಗಳು ಸಮಾನರೂಪದಲ್ಲಿ ಇಂದು ನಿಮಗೆ ಎದುರಾಗುವುದು. ನಿಮ್ಮ ಕಷ್ಟಗಳಿಗೆ ಸಂಗಾತಿಯೂ ಹೆಗಲುಕೊಡುವುದರಿಂದ ಹಗುರವಾಗುವಿರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ತುಲಾ: ಯಾರದೋ ಸಲಹೆಗಳಿಗೆ ಕಿವಿಗೊಟ್ಟು ನಿಮ್ಮ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಗೆ ಮನಸ್ಸಿಗೆ ತೃಪ್ತಿ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ತೋರಿಬಂದೀತು. ನೀವು ಕೈಗೊಳ್ಳುವ ಕೆಲಸಗಳಲ್ಲಿ ಹಿನ್ನಡೆಯಾದಾಗ ನಿರಾಶರಾಗದಿರಿ. ಹಿರಿಯರ ಸಲಹೆಗಳನ್ನು ಪಾಲಿಸಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ.

ಧನು: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಒಂದೊಂದಾಗಿ ಪರಿಹಾರವಾದ ನೆಮ್ಮದಿ ಸಿಗಲಿದೆ. ಮಕ್ಕಳ ಮಾತುಗಳಿಗೂ ಕೆಲವೊಮ್ಮೆ ಬೆಲೆಕೊಡಬೇಕಾಗುತ್ತದೆ ಎಂಬುದನ್ನು ಅರಿಯುವಿರಿ. ಅನಗತ್ಯ ಚಿಂತೆ ಬೇಡ. ದೇವರ ಪ್ರಾರ್ಥನೆ ಮಾಡಿ.

ಮಕರ: ಸಂತಾನಾಪೇಕ್ಷಿತ ದಂಪತಿಗಳಿಗೆ ಎಷ್ಟೋ ದಿನಗಳ ನಂತರ ಶುಭ ಸಮಾಚಾರ ಕೇಳಿಬಂದೀತು. ಅರ್ಧಕ್ಕೇ ನಿಂತ ಕೆಲಸಗಳಿಗೆ ಮರುಚಾಲನೆ ನೀಡಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿಯಿರಲಿದೆ. ಕಿರು ಸಂಚಾರ ಮಾಡುವಿರಿ.

ಕುಂಭ: ಮಾನಸಿಕವಾಗಿ ನಿರಾಸೆ ಅನುಭವಿಸುವ ಸಂದರ್ಭಗಳು ಎದುರಾದೀತು. ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಿ. ಅರ್ಥಿಕವಾಗಿ ಸಾಲಗಾರರ ಕಾಟ ನಿಮ್ಮನ್ನು ಹೈರಾಣಾಗಿಸೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಚಿಂತೆ ಬೇಡ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನೀವು ಅಂದುಕೊಂಡ ಕೆಲಸಗಳು ಇಂದು ಯಶಸ್ವಿಯಾಗಿ ನೆರವೇರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿನ ಪಂಚಾಂಗ ಹೀಗಿದೆ?