Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 11 ನವೆಂಬರ್ 2020 (09:21 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ಕಾರ್ಯರಂಗದಲ್ಲಿ ಉತ್ಸಾಹಕ್ಕೆ ಭಂಗವಾಗುವಂತಹ ಘಟನೆಗಳು ನಡೆದೀತು. ವಾಹನ ಖರೀದಿಗೆ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ವೃಷಭ: ಅನಿರೀಕ್ಷಿತವಾಗಿ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಯಾವುದೇ ವಿಚಾರದಲ್ಲೂ ದೂರಾಲೋಚನೆಯಿಂದ ನಿರ್ಧಾರ ತೆಗೆದುಕೊಳ್ಳಿ. ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ರಾಜಕೀಯ ವರ್ಗದವರಿಗೆ ತಮ್ಮ ಚಾಣಕ್ಷ್ಯತನ ಪ್ರದರ್ಶಿಸಬೇಕಾಗುತ್ತದೆ. ಅತಿಯಾಗಿ ಚಿಂತೆ ಮಾಡುವುದರಿಂದ ಮಾನಸಿಕ ಆರೋಗ್ಯ ಹಾಳಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ.

ಸಿಂಹ: ಮನಸ್ಸಿನ ಆತಂಕ ಹಂತ ಹಂತವಾಗಿ ದೂರವಾಗಲಿದೆ. ಆರ್ಥಿಕವಾಗಿ ಚೇತರಿಕೆಯ ವಾತಾವರಣ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ಇಷ್ಟದೇವರ ಪ್ರಾರ್ಥನೆ ಮಾಡಿ.

ಕನ್ಯಾ: ರಾಜಕೀಯ ವರ್ಗದವರಿಗೆ ಆತಂಕದ ಕ್ಷಣಗಳು ಎದುರಾಗಲಿವೆ. ಕೌಟುಂಬಿಕ ವಿಚಾರದಲ್ಲಿ ಹಲವು ಗೊಂದಲಗಳು ಕಂಡುಬಂದೀತು. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ.

ತುಲಾ: ಕೆಲಸ ಕಾರ್ಯದ ಜವಾಬ್ಧಾರಿಗಳು ಹೆಚ್ಚಾಗಲಿದ್ದು, ದೇಹಾಯಾಸವಾದೀತು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಸಂಚಾರದಲ್ಲಿ ತೊಂದರೆಗಳು ಎದುರಾದೀತು, ಎಚ್ಚರಿಕೆ ಅಗತ್ಯ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ.

ವೃಶ್ಚಿಕ: ಸರಕಾರಿ ಅಧಿಕಾರಿಗಳಿಗೆ ಕೆಲಸದೊತ್ತಡ ಕಂಡುಬರಲಿದೆ. ನಿಮ್ಮ ಅತಿಯಾದ ಆತ್ಮವಿಶ್ವಾಸವೇ ಕೆಲವೊಮ್ಮೆ ನಿಮಗೆ ಮುಳುವಾದೀತು. ಉದ್ಯೋಗದಲ್ಲಿ ಅಭಿವೃದ್ಧಿದಾಯಕ ವಾತಾವರಣವಿದ್ದರೂ ಹಿತವಂಚಕರ ಬಗ್ಗೆ ಎಚ್ಚರಿಕೆಯಿಂದಿರುವುದು ಅಗತ್ಯ.

ಧನು: ರಾಜಕೀಯ ಕ್ಷೇತ್ರದಲ್ಲಿರುವವರು ಜನಾನುರಾಗಿಗಳಾಗಲಿದ್ದಾರೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಬೇಕಾದ ಪರಿಸ್ಥಿತಿ ಎದುರಾದೀತು. ವ್ಯಾಪಾರಿ ವರ್ಗದವರಿಗೆ ಆರ್ಥಿಕ ಲಾಭವಾಗಲಿದೆ.

ಮಕರ: ನಿಮ್ಮ ಮನಸ್ಸಿನಲ್ಲಿ ಅಂದುಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಪ್ರೀತಿ ಪಾತ್ರರ ಆಗಮನ ಮನಸ್ಸಿಗೆ ಸಂತಸ ನೀಡಲಿದೆ.

ಕುಂಭ: ನಿಮ್ಮ ಕೆಲಸಗಳಿಗೆ ಬೇರೆಯವರ ಮೇಲೆ ಅತಿಯಾಗಿ ಅವಲಂಬನೆ ಬೇಡ. ಸರಕಾರಿ ಕೆಲಸಗಳಿಗಾಗಿ ಓಡಾಟಟ ನಡೆಸಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆಯಿಂದಿರುವುದು ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಮೀನ: ವೃತ್ತಿರಂಗದಲ್ಲಿ ಕೀರ್ತಿ ಸಂಪಾದಿಸುವ ಯೋಗ ಕೂಡಿಬರುವುದು. ಮಹಿಳೆಯರಿಗೆ ಚಿ‍ನ್ನಾಭರಣ ಖರೀದಿ ಯೋಗ ಬರಲಿದೆ. ವಿವೇಚನೆಯ ಕೊರತೆಯಿಂದ ನಿರ್ಧಾರ ತೆಗೆದುಕೊಳ್ಳುವಾಗ ಎಡವಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments