Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 14 ನವೆಂಬರ್ 2020 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಕಾಳಜಿವಹಿಸುವುದು ಸೂಕ್ತ. ಸಂಗಾತಿಯ ಸಹಕಾರ ಸಿಗದೇ ಮನಸ್ಸಿಗೆ ಬೇಸರವಾದೀತು. ಹಿರಿಯರ ಮಾತಿಗೆ ಬೆಲೆಕೊಡಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ವೃಷಭ: ವೃತ್ತಿರಂಗದಲ್ಲಿ ಎಲ್ಲವೂ ನಿಮ್ಮ ಅನುಕೂಲಕ್ಕೆ ತಕ್ಕಂತೆ ನಡೆಯಲಿದೆ. ಅನಗತ್ಯ ಚಿಂತೆ ಬೇಡ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗುವ ಸಾಧ್ಯತೆಯಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾದೀತು.

ಮಿಥುನ: ಮಾನಸಿಕವಾಗಿ ನಿಮಗೆ ಸಂತಸ ಕೊಡುವ ಸುದ್ದಿ ಕೇಳಿಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಬಯಸಿದ ಸಂಬಂಧ ಕೂಡಿಬರುವುದು. ತಾಳ್ಮೆಯಿಂದಿರಿ.

ಕರ್ಕಟಕ: ಮನಸ್ಸಿನ ಆಸೆಗಳಿಗೆ ಕಡಿವಾಣ ಹಾಕುವುದು ಕಷ್ಟ. ನಿಮ್ಮ ಪ್ರೀತಿ ಪಾತ್ರರನ್ನು ಭೇಟಿ ಮಾಡಲು ಮನಸ್ಸು ಹಾತೊರೆಯುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಏರಿಳಿತ ಸಾಮಾನ್ಯ.

ಸಿಂಹ: ಎಷ್ಟೋ ದಿನಗಳಿಂದ ಭೇಟಿಯಾಗಬೇಕೆಂದಿದ್ದ ವ್ಯಕ್ತಿಯನ್ನು ಭೇಟಿ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ಧೀರಿ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಮನೆಯವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಲಿದ್ದು, ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ದೂರ ಪ್ರಯಾಣವನ್ನು ಅನಿವಾರ್ಯವಾಗಿ ಮುಂದೂಡಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ತಾಳ್ಮೆ, ಸಂಯಮ ಅಗತ್ಯ.

ತುಲಾ: ಅನಿರೀಕ್ಷಿತವಾಗಿ ಬಯಸಿದ ವಸ್ತು, ವ್ಯಕ್ತಿ ಭೇಟಿಯಾಗಲಿದ್ದೀರಿ ಅಥವಾ ನಿಮ್ಮ ಬಳಿಗೆ ಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ. ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿದ್ದು, ಶೀಘ್ರದಲ್ಲೇ ವಿವಾಹ ಯೋಗವಿದೆ. ಕೌಟುಂಬಿಕ ವ್ಯವಹಾರಗಳ ಬಗ್ಗೆ ಚಿಂತೆಯಾದೀತು. ಸಂಗಾತಿಯ ಸಹಕಾರ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಿ ನಿರಾಳವಾಗಲಿದೆ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಆಲಿಸಲಿದ್ದೀರಿ. ವಿದ್ಯಾರ್ಥಿಗಳು ಶಿಕ್ಷಕರ ಪ್ರಶಂಸೆಗೊಳಗಾಗಲಿದ್ದಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಕೊರತೆಯಿಂದ ಭಿನ್ನಾಭಿಪ್ರಾಯಗಳುಂಟಾದೀತು. ಸಹನೆಯಿಂದ ವರ್ತಿಸಿ. ಸ್ವಯಂ ವೃತ್ತಿಯವರಿಗೆ ಮುನ್ನಡೆ ಯೋಗವಿದೆ. ಸರಕಾರಿ ವೃತ್ತಿಯಲ್ಲಿರುವವರಿಗೆ ಕಾರ್ಯದೊತ್ತಡ ಕಡಿಮೆಯಾಗುವುದು.

ಕುಂಭ: ನೂತನ ದಂಪತಿಗಳಿಗೆ ಸಂತಾನ ಫಲ ಒದಗಿಬರಲಿದೆ. ಮನೆಯಲ್ಲಿ ಕುಟುಂಬ ಸದಸ್ಯರ ಪ್ರೀತಿ-ವಿಶ್ವಾಸ ಗಳಿಸಲಿದ್ದೀರಿ. ನೂತನ ಕಾರ್ಯಗಳಿಗೆ ಅಡಚಣೆ ತೋರಿಬಂದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆಯಾದೀತು. ಆದರೆ ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ದೇವತಾ ಪ್ರಾರ್ಥನೆ ಮರೆಯದಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ದಿನ ಪಂಚಾಂಗ ಹೀಗಿದೆ!