Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 15 ನವೆಂಬರ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಎಲ್ಲರೂ ಸಂಭ್ರಮದಲ್ಲಿದ್ದರೂ ನೀವು ಮಾತ್ರ ಏನೋ ಕಳೆದುಕೊಂಡ ನಿರುತ್ಸಾಹದಲ್ಲಿರುತ್ತೀರಿ. ಆತ್ಮೀಯರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ವೃಷಭ: ದೇಹಾರೋಗ್ಯದಲ್ಲಿ ಏರುಪೇರ ಕಂಡುಬಂದೀತು. ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ.

ಮಿಥುನ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು.

ಕರ್ಕಟಕ: ಅಂದುಕೊಂಡಿದ್ದ ಕೆಲಸಗಳು ಅಂದುಕೊಂಡ ರೀತಿಯಲ್ಲಿ ಸಾಗದೇ ಮನಸ್ಸಿಗೆ ನಿರಾಸೆಯಾದೀತು. ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲಗಳು ಕಾಡಲಿವೆ. ವೃತ್ತಿರಂಗದಲ್ಲಿ ಖಚಿತ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ.

ಸಿಂಹ: ಸಾಂಸಾರಿಕವಾಗಿ ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಕಂಡುಬಂದೀತು. ತಾಳ್ಮೆ, ಸಂಯಮದಿಂದ ಎಲ್ಲವನ್ನೂ ನಿಭಾಯಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ.

ಕನ್ಯಾ: ದೂರ ಪ್ರಯಾಣದಿಂದ ದೇಹಾಯಾಸವಾದೀತು. ಮಕ್ಕಳ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಸಂಗಾತಿಯ ಸಹಕಾರ ಸಿಗುವುದರಿಂದ ಚಿಂತೆ ಬೇಡ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ತುಲಾ: ಮನೆಯವರ ಹಿತದೃಷ್ಟಿಯಿಂದ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಮುನ್ನಡೆಗೆ ಪೂರಕವಾದ ಅವಕಾಶಗಳು ದೊರೆಯಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರಲಿದೆ.

ಧನು: ದೇಹಾರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ. ಮಕ್ಕಳ ಸಹಕಾರದಿಂದ ಮನಸ್ಸಿಗೆ ಸಂತಸವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಅನಗತ್ಯವಾಗಿ ಚಿಂತೆ ಮಾಡುತ್ತಾ ಮಾನಸಿಕ ಆರೋಗ್ಯ ಹಾಳುಮಾಡಿಕೊಳ್ಳಬೇಡಿ. ಕೆಳ ಹಂತದ ನೌಕರರಿಗೆ ಸದ್ಯದಲ್ಲೇ ಬಡ್ತಿ ಯೋಗವಿದೆ. ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಾಡೀತು. ಹಿರಿಯರಿಗೆ ಅಭಿಪ್ರಾಯಗಳಿಗೆ ಬೆಲೆಕೊಡಿ.

ಕುಂಭ: ಸಂಗಾತಿಯ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ದಾಂಪತ್ಯದಲ್ಲಿ ತಾಳ್ಮೆ, ಸಹನೆ ಅಗತ್ಯ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಕೆಲಸ ಕಾರ್ಯಗಳಲ್ಲಿ ಮುನ್ನಡೆಯಿರಲಿದ್ದು, ಓಡಾಟ ನಡೆಸಬೇಕಾಗುತ್ತದೆ.

ಮೀನ: ಮಹಿಳೆಯರು ಮನೆಗೆ ಬರಲಿರುವ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿ ವರ್ಗದವರಿಗೆ ನಂಬಿಕಸ್ಥರಿಂದಲೇ ವಂಚನೆಗೊಳಗಾಗುವ ಭೀತಿ ಎದುರಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments