Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 16 ನವೆಂಬರ್ 2020 (09:23 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮೇಲಧಿಕಾರಿಗಳ ಅಸಡ್ಡೆ ಧೋರಣೆ ನಿಮ್ಮ ತಾಳ್ಮೆಗೆಡಿಸಲಿದೆ. ಹಿರಿಯರ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ.
 
ವೃಷಭ: ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ.ಉದ್ಯೋಗ ಕ್ಷೇತ್ರದಲ್ಲಿ ಬಿಡುವಿನ ದಿನದ ಖುಷಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ.
 
ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ತೋರಿಬಂದೀತು. ಮಾನಸಿಕವಾಗಿ ನಿಮಗೆ ಬಾಧೆ ನೀಡುವ ವಿಚಾರದ ಕುರಿತು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.
 
ಕರ್ಕಟಕ: ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಅನಿರೀಕ್ಷಿತ ಅನಾಹುತದ ಭಯವಿದೆ. ಎಚ್ಚರಿಕೆಯಿಂದ ಕೆಲಸ ಮಾಡಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ತಾಳ್ಮೆಯಿರಲಿ.
 
ಸಿಂಹ: ನಯವಾದ ಮಾತುಗಾರಿಕೆಯಿಂದ ಎದುರಿಗಿದ್ದವರ ಮನಸ್ಸು ಗೆಲ್ಲುವಿರಿ. ಆದರೆ ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಇಷ್ಟವಾಗದೇ ಹೋದೀತು. ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಕನ್ಯಾ: ನೀವು ಅಂದುಕೊಂಡಿದ್ದ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ದೂರ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮರೆಯದಿರಿ.
 
ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಬಯಸಿದ ಸಂಬಂಧಗಳು ಹುಡುಕಿಕೊಂಡು ಬರಲಿವೆ. ನೂತನ ದಂಪತಿಗಳ ನಡುವೆ ಹೊಂದಾಣಿಕೆ ಕೊರತೆ ಕಂಡುಬಂದೀತು. ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.
 
ವೃಶ್ಚಿಕ: ವೃತ್ತಿರಂಗದಲ್ಲಿ ನಿಮಗೆ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ದೂರವಾಗಿ ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಎಚ್ಚರಿಕೆಯಿರಲಿ.
 
ಧನು: ನೀವು ಇದುವರೆಗೆ ನಂಬಿಕೊಂಡಿದ್ದವರಿಂದಲೇ ನಿಮಗೆ ವಂಚನೆಯಾದೀತು. ಯಾರನ್ನೂ ಅತಿಯಾಗಿ ಅವಲಂಬಿಸುವುದು ಬೇಡ. ಸಂಗಾತಿಯ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ.
 
ಮಕರ: ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋದರೆ ತೊಂದರೆ ತಪ್ಪಿದ್ದಲ್ಲ. ಕೋರ್ಟು ಕಚೇರಿ ವ್ಯಾಜ್ಯಗಳಲ್ಲಿ ತೀರ್ಪು ನಿಮ್ಮ ಪರವಾಗಲಿದೆ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು, ಎಚ್ಚರಿಕೆಯಿರಲಿ.
 
ಕುಂಭ: ಇಂದು ಅನಿವಾರ್ಯವಾಗಿ ದೂರ ಸಂಚಾರ ಮಾಡಲಿದ್ದು, ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಹಿರಿಯರಿಗೆ ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.
 
ಮೀನ: ನಿರುದ್ಯೋಗಿಗಳಿಗೆ ಅನಿರೀಕ್ಷಿತವಾಗಿ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಮಹಿಳೆಯರಿಗೆ ಕಳೆದು ಹೋದ ವಸ್ತು ಮರಳಿ ಪಡೆದ ಸಂತಸ ಸಿಗಲಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments