Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 17 ನವೆಂಬರ್ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಾನಸಿಕವಾಗಿ ಕಾಡುವ ಕೆಲವೊಂದು ವಿಚಾರಗಳಿಗೆ ಆಪ್ತರೊಂದಿಗೆ ದುಃಖ ಹಂಚಿಕೊಂಡು ಪರಿಹಾರ ಕಂಡುಕೊ‍ಳ್ಳಲಿದ್ದೀರಿ. ಸಂಗಾತಿಯ ಅಸಹಕಾರ ಮನಸ್ಸಿಗೆ ನೋವುಂಟುಮಾಡಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸ್ಪಷ್ಟವಾದ ನಿರ್ಧಾರಕ್ಕೆ ಬರಲಾಗದೇ ಮಾನಸಿಕವಾಗಿ ಒದ್ದಾಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಉದಾಸೀನ ಪ್ರವೃತ್ತಿಯಿಂದ ಹಿನ್ನಡೆಯಾದೀತು. ವೃತ್ತಿಗೆ ಸಂಬಂಧಿಸಿದ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಎಚ್ಚರಿಕೆ ಅಗತ್ಯ.

ಮಿಥುನ: ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಮುಖ್ಯ. ಆಪ್ತ ಮಿತ್ರರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಮುನ್ನಡೆ ತೋರಿಬರಲಿದೆ.

ಕರ್ಕಟಕ: ಆಪ್ತೇಷ್ಟರನ್ನು ಅಗಲುವ ನೋವು ಕಾಡಲಿದೆ. ಇಷ್ಟಮಿತ್ರರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಂದರ್ಭವಿದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ದೂರ ಸಂಚಾರದಿಂದ ನಿಮ್ಮ ಕಾರ್ಯಸಿದ್ಧಿಯಾದೀತು. ಆದರೆ ಮನೆಯಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಕಾರ್ಯರಂಗದಲ್ಲಿ ಮುನ್ನಡೆಗೆ ಅವಕಾಶಗಳು ತೋರಿಬರಲಿದೆ. ಕೌಟುಂಬಿಕ ವ್ಯಾಜ್ಯಗಳಿಗೆ ಹಿರಿಯರಿಂದ ಪರಿಹಾರ ಸಿಗುವುದು.

ಕನ್ಯಾ: ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳನ್ನೂ ಮುಂದೂಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಮಕ್ಕಳ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ಆದರೆ ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಭಾವೋದ್ವೇಗದಿಂದ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನಿಮಗೆ ಅನುಕೂಲಕರವಾದ ವಾತಾವರಣವಿರುವುದರಿಂದ ಕಾರ್ಯ ಸಾಧನೆಗೆ ತೊಂದರೆಯಾಗದು.

ವೃಶ್ಚಿಕ: ತಾಂತ್ರಿಕ ವೃತ್ತಿಯವರಿಗೆ ಭವಿಷ್ಯದ ಚಿಂತೆ ಕಾಡಲಿದೆ. ಕೌಟುಂಬಿಕವಾಗಿ ಕುಟುಂಬ ಸದಸ್ಯರ ಸಹಕಾರವಿರುವುದರಿಂದ ಚಿಂತೆಗಳು ದೂರವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಧನು: ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳು ನಿಮ್ಮ ನಿರ್ಧಾರಗಳನ್ನು ಬದಲಾಯಿಸೀತು. ವಾರದ ಕೊನೆಯಲ್ಲಿ ತಿರುಗಾಟಕ್ಕೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಭದ್ರವಾಗಲು ಹೊಸ ಯೋಜನೆಗಳನ್ನು ಕೈ ಹಾಕುವಿರಿ.

ಮಕರ: ಮನಸ್ಸಿನ ಆಸೆ ಪೂರೈಸಲು ಕೆಲವೊಂದು ತ್ಯಾಗ ಮಾಡಬೇಕಾಗಿಬರುತ್ತದೆ. ಇತರರ ಮೇಲೆ ಅತಿಯಾಗಿ ಅವಲಂಬನೆಯಾಗುವುದು ಬೇಡ. ಅವಿವಾಹಿತರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಮನಸ್ಸಿಗೆ ತುಂಬಾ ಸಂತೋಷದಾಯಕ ದಿನವಿಂದು. ಆಪ್ತೇಷ್ಟರನ್ನು ಭೇಟಿಯಾದ ಸಂತೋಷ ನಿಮಗಾಗುವುದು. ಆದರೆ ಸಂಗಾತಿಯ ಆರೋಗ್ಯ ಚಿಂತೆಗೆ ಕಾರಣವಾದೀತು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಮೀನ: ಕಷ್ಟದ ಸಮಯದಲ್ಲಿ ಸ್ನೇಹಿತರು ಸಕಾಲದಲ್ಲಿ ನೆರವಾಗಲಿದ್ದಾರೆ. ನಿಮ್ಮ ಸ್ವಯಂಕೃತ ಅಪರಾಧಕ್ಕೆ ತಕ್ಕ ಬೆಲೆ ತೆರಬೇಕಾದೀತು. ಆತ್ಮವಿಶ್ವಾಸದಿಂದ ಮುನ್ನಡೆದಲ್ಲಿ ಜಯ ನಿಮ್ಮದಾಗಲಿದೆ. ಹೊಸ ವಾಹನ ಖರೀದಿಗೆ ಯೋಗ ಕೂಡಿಬರುವುದು.

Share this Story:

Follow Webdunia kannada

ಮುಂದಿನ ಸುದ್ದಿ

ದಿನ ಪಂಚಾಂಗ ಹೀಗಿದೆ!