Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 19 ನವೆಂಬರ್ 2020 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಳ ಹಂತದ ನೌಕರರಿಗೆ ಸೂಕ್ತ ವೇತನ ಸಿಗದೇ ಪರದಾಡಬೇಕಾಗುತ್ತದೆ. ಮೇಲಧಿಕಾರಿಗಳ ಅಸಡ್ಡೆ ನಿಮ್ಮ ಆಕ್ರೋಶ ಹೆಚ್ಚಿಸಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸುಖ, ದುಃಖಗಳು ಸಮನಾಗಿ ಬರಲಿವೆ. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ತಾಳ್ಮೆ ಬೆಳೆಸಿಕೊಳ್ಳಬೇಕು. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ.

ಮಿಥುನ: ಕಾರ್ಯಬಾಹುಳ್ಯದಿಂದಾಗಿ ಅಂದುಕೊಂಡ ಹಾಗೆ ಪ್ರೀತಿ ಪಾತ್ರರಿಗೆ ಸಮಯ ಕೊಡಲಾಗದೇ ಅವರ ಮುನಿಸಿಗೆ ಕಾರಣವಾಗಲಿದ್ದೀರಿ. ತಾಳ್ಮೆ, ಸಂಯಮವಿರಲಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಗಮನಕೊಡುವುದು ಅಗತ್ಯ.

ಕರ್ಕಟಕ: ವೃತ್ತಿರಂಗದಲ್ಲಿರುವವರಿಗೆ ನಾನಾ ರೀತಿಯ ಅವಕಾಶಗಳು ತೋರಿಬರಲಿವೆ. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಇಷ್ಟು ದಿನ ಕಷ್ಟಪಡುತ್ತಿದ್ದ ಕೆಲಸ ಇಂದು ಸುಗಮವಾಗಿ ನೆರವೇರಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಗಮನಕೊಡಿ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಮಕ್ಕಳ ವಿಚಾರದಲ್ಲಿ ಸಂತಸಕ್ಕೆ ಎಣೆಯಿರದು. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಗೃಹಲಂಕಾರ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ನಿಮ್ಮ ತಾಳ್ಮೆಯೇ ನಿಮಗೆ ಶ್ರೀರಕ್ಷೆಯಾಗಲಿದೆ.

ತುಲಾ: ಇಲ್ಲ ಸಲ್ಲದ ವಿಚಾರಕ್ಕೆ ಆಪ್ತರೊಂದಿಗೆ ತಗಾದೆ ತೆಗೆದರೆ ಸಂಬಂಧಗಳು ಹಾಳಾದೀತು. ತಾಳ್ಮೆ ಮುಖ್ಯವಾಗಿರಬೇಕು. ಹಿರಿಯರ ಸಲಹೆಗಳನ್ನು ಪಾಲಿಸಿ. ಕಳೆದು ಹೋದ ವಸ್ತುಗಳಿಗಾಗಿ ಹುಡುಕಾಟ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಾಗಲಿದೆ. ಆದರೆ ಖರ್ಚು ವೆಚ್ಚಗಳು ಆದಾಯಕ್ಕಿಂತ ಮೀರಿ ಹೋಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ.

ಧನು: ಕಟ್ಟಡ ನಿರ್ಮಾಣ ವೃತ್ತಿಯವರಿಗೆ ಆದಾಯ ಗಳಿಕೆಗೆ ಉತ್ತಮ ಅವಕಾಶಗಳು ತೋರಿಬರಲಿವೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರೀತಿಗೆ ಪಾತ್ರರಾಗಲಿದ್ದಾರೆ.

ಮಕರ: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಹೊಂಚು ಹಾಕಿರುತ್ತಾರೆ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಕೌಟುಂಬಿಕ ಸುಖಕ್ಕೆ ಕೊರತೆಯಿರದು. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕುಂಭ: ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಅನಗತ್ಯ ಅಪವಾದಗಳನ್ನು ಕೇಳಬೇಕಾಗುತ್ತದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಹಂತ ಹಂತವಾಗಿ ದೂರವಾಗಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ವ್ಯಾಪಾರಿ ವರ್ಗದವರಿಗೆ ಲಾಭ ಗಳಿಸಲು ಮಾರ್ಗಗಳು ಗೋಚರವಾಗಲಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೂರ್ಯ ಗ್ರಹದ ಅನುಗ್ರಹ ಪಡೆಯಲು ಈ ಬಣ್ಣವನ್ನು ಬಳಸಿ