Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 19 ನವೆಂಬರ್ 2020 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಳ ಹಂತದ ನೌಕರರಿಗೆ ಸೂಕ್ತ ವೇತನ ಸಿಗದೇ ಪರದಾಡಬೇಕಾಗುತ್ತದೆ. ಮೇಲಧಿಕಾರಿಗಳ ಅಸಡ್ಡೆ ನಿಮ್ಮ ಆಕ್ರೋಶ ಹೆಚ್ಚಿಸಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸುಖ, ದುಃಖಗಳು ಸಮನಾಗಿ ಬರಲಿವೆ. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ತಾಳ್ಮೆ ಬೆಳೆಸಿಕೊಳ್ಳಬೇಕು. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ.

ಮಿಥುನ: ಕಾರ್ಯಬಾಹುಳ್ಯದಿಂದಾಗಿ ಅಂದುಕೊಂಡ ಹಾಗೆ ಪ್ರೀತಿ ಪಾತ್ರರಿಗೆ ಸಮಯ ಕೊಡಲಾಗದೇ ಅವರ ಮುನಿಸಿಗೆ ಕಾರಣವಾಗಲಿದ್ದೀರಿ. ತಾಳ್ಮೆ, ಸಂಯಮವಿರಲಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಗಮನಕೊಡುವುದು ಅಗತ್ಯ.

ಕರ್ಕಟಕ: ವೃತ್ತಿರಂಗದಲ್ಲಿರುವವರಿಗೆ ನಾನಾ ರೀತಿಯ ಅವಕಾಶಗಳು ತೋರಿಬರಲಿವೆ. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ದಿನದಂತ್ಯಕ್ಕೆ ನೆಮ್ಮದಿ.

ಸಿಂಹ: ಇಷ್ಟು ದಿನ ಕಷ್ಟಪಡುತ್ತಿದ್ದ ಕೆಲಸ ಇಂದು ಸುಗಮವಾಗಿ ನೆರವೇರಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಗಮನಕೊಡಿ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಮಕ್ಕಳ ವಿಚಾರದಲ್ಲಿ ಸಂತಸಕ್ಕೆ ಎಣೆಯಿರದು. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಗೃಹಲಂಕಾರ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ನಿಮ್ಮ ತಾಳ್ಮೆಯೇ ನಿಮಗೆ ಶ್ರೀರಕ್ಷೆಯಾಗಲಿದೆ.

ತುಲಾ: ಇಲ್ಲ ಸಲ್ಲದ ವಿಚಾರಕ್ಕೆ ಆಪ್ತರೊಂದಿಗೆ ತಗಾದೆ ತೆಗೆದರೆ ಸಂಬಂಧಗಳು ಹಾಳಾದೀತು. ತಾಳ್ಮೆ ಮುಖ್ಯವಾಗಿರಬೇಕು. ಹಿರಿಯರ ಸಲಹೆಗಳನ್ನು ಪಾಲಿಸಿ. ಕಳೆದು ಹೋದ ವಸ್ತುಗಳಿಗಾಗಿ ಹುಡುಕಾಟ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಾಗಲಿದೆ. ಆದರೆ ಖರ್ಚು ವೆಚ್ಚಗಳು ಆದಾಯಕ್ಕಿಂತ ಮೀರಿ ಹೋಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ.

ಧನು: ಕಟ್ಟಡ ನಿರ್ಮಾಣ ವೃತ್ತಿಯವರಿಗೆ ಆದಾಯ ಗಳಿಕೆಗೆ ಉತ್ತಮ ಅವಕಾಶಗಳು ತೋರಿಬರಲಿವೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರೀತಿಗೆ ಪಾತ್ರರಾಗಲಿದ್ದಾರೆ.

ಮಕರ: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಹೊಂಚು ಹಾಕಿರುತ್ತಾರೆ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಕೌಟುಂಬಿಕ ಸುಖಕ್ಕೆ ಕೊರತೆಯಿರದು. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಕುಂಭ: ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಅನಗತ್ಯ ಅಪವಾದಗಳನ್ನು ಕೇಳಬೇಕಾಗುತ್ತದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಹಂತ ಹಂತವಾಗಿ ದೂರವಾಗಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ವ್ಯಾಪಾರಿ ವರ್ಗದವರಿಗೆ ಲಾಭ ಗಳಿಸಲು ಮಾರ್ಗಗಳು ಗೋಚರವಾಗಲಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments