ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 22 ನವೆಂಬರ್ 2020 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ದುಡುಕು ನಿರ್ಧಾರಗಳಿಂದ, ಮಾತಿನಿಂದ ಅನಾಹುತವಾದೀತು. ತಾಳ್ಮೆ, ಸಂಯಮ ಅಗತ್ಯ. ಕಷ್ಟಪಟ್ಟಿದ್ದಕ್ಕೆ ತಕ್ಕ ಫಲ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಿ ಆತಂಕಕ್ಕೆ ಕಾರಣವಾದೀತು. ಕಿರು ಓಡಾಟ ನಡೆಸುವಿರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಬಗ್ಗೆ ಹೆಚ್ಚು ಚಿಂತೆ ಮಾಡಬೇಕಿಲ್ಲ. ನಿಮ್ಮ ಶತ್ರುಗಳ ಬಗ್ಗೆ ಎಚ್ಚರವಾಗಿದ್ದರೆ ಸಾಕು. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಮಿಥುನ: ನೂತನ ಯೋಜನೆಗೆ ಚಾಲನೆ ನೀಡಲು ಬೇಕಾದ ಎಲ್ಲಾ ತಯಾರಿಗಳನ್ನೂ ಮಾಡಲಿದ್ದೀರಿ. ಆಪ್ತರೊಂದಿಗೆ ನಿಮ್ಮ ದುಃಖ ಹಂಚಿಕೊಂಡು ಮನಸ್ಸು ಹಗುರವಾಗಿಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಒಳಿತು.

ಕರ್ಕಟಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ನಿರುದ್ಯೋಗಿಗಳಿಗೆ ತಮ್ಮ ವಿದ್ಯಾಭ್ಯಾಸಕ್ಕೆ ತಕ್ಕ ಉದ್ಯೋಗ ಸಿಗಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಮಹಿಳೆಯರಿಗೆ  ಚಿನ್ನಾಭರಣ ಖರೀದಿ ಮಾಡುವ ಕನಸು ಸದ್ಯದಲ್ಲೇ ನನಸಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ಆರೋಗ್ಯ ಸಂಬಂಧಿತ ಬಹುದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಹಣಕಾಸಿನ ಮುಗ್ಗಟ್ಟು ಎದುರಾದೀತು. ಆದರೂ ತಾಳ್ಮೆಗೆಡಬೇಡಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ.

ತುಲಾ: ಹೊಸ ಮನೆ, ಭೂಮಿ ಖರೀದಿಯ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಹಿರಿಯರು ದಾನ ಧರ್ಮಾದಿ ಕೆಲಸಗಳಿಂದ ನೆಮ್ಮದಿ ಪಡೆಯಲಿದ್ದಾರೆ.

ವೃಶ್ಚಿಕ: ಅನಿರೀಕ್ಷಿತವಾಗಿ ಎದುರಾಗುವ ಖರ್ಚು ವೆಚ್ಚಗಳಿಗೆ ಇಂದೇ ಯೋಜನೆ ರೂಪಿಸಿಡುವುದು ಉತ್ತಮ. ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು.

ಧನು: ದೇಹಾರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಲಿದ್ದು, ಚಿಂತೆ ಬೇಕಾಗಿಲ್ಲ. ಕಿರಿಯರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿದ್ದರೆ ಉತ್ತಮ.

ಮಕರ: ಭೂ ಖರೀದಿ ಸಂಬಂಧವಾಗಿ ಅಲೆದಾಡಬೇಕಾದೀತು. ಸರಕಾರಿ ಲೆಕ್ಕಪತ್ರಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಿ.

ಕುಂಭ: ಆಗಾಗ ವಿಘ್ನಗಳು ಎದುರಾದರೂ ನೀವು ಅಂದುಕೊಂಡ ಕೆಲಸಗಳು ನೆರವೇರಿಸಲು ತೊಂದರೆಯಾಗದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ನೀವು ಮಾಡಿದ ಒಳ್ಳೆಯ ಕೆಲಸಕ್ಕೆ ತಕ್ಕ ಪ್ರತಿಫಲ ಸಿಗುವುದು.

ಮೀನ: ಮಕ್ಕಳ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವುದು ಉತ್ತಮ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ಯೋಗ್ಯ ವಯಸ್ಕರಿಗೆ ತಕ್ಕ ವಿವಾಹ ಪ್ರಸ್ತಾಪಗಳು ಬಂದೀತು. ಎಚ್ಚರಿಕೆಯಿಂದ ಮುಂದೆ ಹೆಜ್ಜೆಯಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments