ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 23 ನವೆಂಬರ್ 2020 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಏನೇ ಮಾಡಿದ್ದರೂ ಆಗಬೇಕಾಗಿರುವುದು ಆಗಿಯೇ ತೀರುತ್ತದೆ. ಹಾಗಾಗಿ ಅನಗತ್ಯ ಚಿಂತೆ ಬೇಡ. ಕೌಟುಂಬಿಕವಾಗಿ ಸಂಗಾತಿಯ ಸಲಹೆಯನ್ನು ಪಾಲಿಸಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಮನಸ್ಸು ಹೇಳಿದಂತೆ ಕೇಳಿದರೆ ನಿಮಗೆ ಉತ್ತಮ. ಮಹಿಳೆಯರಿಗೆ ಪ್ರೀತಿ ಪಾತ್ರರಿಂದ ಅನಿರೀಕ್ಷಿತ ಉಡುಗೊರೆಗಳು ಸಿಗಲಿವೆ. ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಕುಟುಂಬದ ಹಿರಿಯರ ಜತೆ ಚರ್ಚೆ ನಡೆಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟುಮಾಡುವವರು ಇದ್ದೇ ಇರುತ್ತಾರೆ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆ ಮೈಗೂಡಿಸಿಕೊಳ್ಳಬೇಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ. ತಾಳ್ಮೆಯಿರಲಿ.

ಕರ್ಕಟಕ: ಬಯಸಿದ ವಸ್ತುಗಳು ತಾನಾಗಿಯೇ ಕೈಗೆ ಬಂದು ಸೇರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಹಿಳೆಯರಿಗೆ ಸದ್ಯದಲ್ಲೇ ಚಿನ್ನಾಭರಣ ಖರೀದಿ ಯೋಗ ಕೂಡಿಬರಲಿದೆ. ಮಂಗಲ ಕಾರ್ಯಗಳು ನೆರವೇರಲಿದೆ.

ಸಿಂಹ: ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಸೂಕ್ತ ಸಂಬಂಧಗಳು ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಕನ್ಯಾ: ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ತಕ್ಕ ಫಲ ದೊರೆಯುವುದು. ಚಿಂತಿತ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಅಗತ್ಯ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಪ್ರೇಮಿಗಳಿಗೆ ಮನೆಯವರ ವಿರೋಧ ವ್ಯಕ್ತವಾದೀತು. ತಾಳ್ಮೆಯಿರಲಿ.

ತುಲಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ನೀವು ಅಂದುಕೊಂಡಿದ್ದ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರುವುದು. ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ವೃಶ್ಚಿಕ: ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಕೊಂಚ ಕಷ್ಟವಾದರೂ ಅಂತಿಮ ಜಯ ನಿಮ್ಮದಾಗುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ಧನು: ಬಹುದಿನಗಳ ನಿಮ್ಮ ವಾಹನ ಖರೀದಿ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಆದರೆ ದೇಹಾರೋಗ್ಯದಲ್ಲಿ ಏರುಪೇರಾಗುವುದರಿಂದ ಚಿಂತೆಯಾದೀತು. ಸಾ<ಸಾರಿಕವಾಗಿ ಸಾಮರಸ್ಯಕ್ಕೆ ಕೊರತೆಯಿರದು. ಚಿಂತೆ ಬೇಡ.

ಮಕರ: ಮಾನಸಿಕವಾಗಿ ಋಣಾತ್ಮಕ ಆಲೋಚನೆಗಳು ಕಂಡುಬಂದೀತು. ಹಿರಿಯರಿಗೆ ದಾನ ಧರ್ಮಾದಿ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಕೈ ಹಿಡಿದ ಕೆಲಸಗಳನ್ನು ಮುಗಿಸದೇ ಬಿಡುವವರಲ್ಲ. ಆದರೆ ಇಂದು ಯಾಕೋ ಒಂದು ರೀತಿಯ ನಿರುತ್ಸಾಹ ಕಂಡುಬಂದೀತು. ಮನಸ್ಸಿಗೆ ಹಿಡಿಸಿದ ವ್ಯಕ್ತಿಗಳ ಭೇಟಿಗೆ ಹಾತೊರೆಯುವಿರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು.

ಮೀನ: ನಿಮ್ಮ ಒಳ್ಳೆಯ ಆಲೋಚನೆಗಳೇ ನಿಮಗೆ ಶ್ರೀರಕ್ಷೆಯಾದೀತು. ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಯ ಆಗಮನವಾದೀತು. ಇಷ್ಟ ಭೋಜನ ಪ್ರಾಪ್ತಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments