ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 24 ನವೆಂಬರ್ 2020 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬೇರೆಯವರು ಕಷ್ಟಕ್ಕೆ ಸ್ಪಂದಿಸಲು ಹೋಗಿ ನೀವು ಕಷ್ಟಕ್ಕೆ ಸಿಲುಕಿಕೊಳ್ಳುವ ಪರಿಸ್ಥಿತಿ ಬಂದೀತು. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಬಾಕಿ ಹಣ ಪಾವತಿಯಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ.

ವೃಷಭ: ಮಾನಸಿಕವಾಗಿ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಕಂಡುಬಂದೀತು. ನಿಮ್ಮ ಕಷ್ಟಕ್ಕೆ ಬೇರೆಯವರು ಜತೆಯಾಗಲಿದ್ದಾರೆ. ಅನಗತ್ಯ ಚಿಂತೆ ಬೇಡ. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಮಿಥುನ: ಇಷ್ಟು ದಿನ ಕಾಯುತ್ತಿದ್ದ ಫಲಿತಾಂಶ ಇಂದು ನಿಮ್ಮ ಪಾಲಿಗೆ ಶುಭಕರವಾಗಿ ಬರಲಿದೆ. ನಿರುದ್ಯೋಗಿಗಳು ಉದ್ಯೋಗ ಸಂದರ್ಶನಕ್ಕೆ ಪರ ಊರಿಗೆ ಪ್ರಯಾಣ ಮಾಡುವರು. ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಯೋಗವಿದೆ.

ಕರ್ಕಟಕ: ಇದುವರೆಗೆ ಕಷ್ಟಪಟ್ಟು ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಬಳಸಲು ಯೋಜನೆ ಮಾಡಿಕೊಳ್ಳುವಿರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ.

ಸಿಂಹ: ಕಷ್ಟದಲ್ಲಿರುವ ಸಂಬಂಧಿಕರಿಗೆ ಕೈಲಾದ ಸಹಾಯ ಮಾಡಲಿದ್ದೀರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಆದರೆ ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳು ಕೀರ್ತಿ ಸಂಪಾದಿಸುವರು.

ಕನ್ಯಾ: ನಿಮ್ಮ ಕೆಲವೊಂದು ನಿರ್ಧಾರಗಳು ಹಿರಿಯರ ಅಸಮಾಧಾನಕ್ಕೆ ಕಾರಣವಾದೀತು. ಪ್ರೇಮ ಸಂಬಂಧಗಳು ಮನೆಯವರ ಎದುರು ಬಹಿರಂಗವಾದೀತು. ತಾಂತ್ರಿಕ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆ ಕಂಡುಬರಲಿದೆ.

ತುಲಾ: ಅಧಿಕ ಧನ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಕಿರು ಓಡಾಟ ನಡೆಸುವಿರಿ.

ವೃಶ್ಚಿಕ: ವ್ಯಾವಹಾರಿಕವಾಗಿ ನಷ್ಟ ಅನುಭವಿಸಲು ಮಾನಸಿಕವಾಗಿ ಸಿದ್ಧರಾಗಿ. ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳನ್ನು ಎದುರು ಹಾಕಿಕೊಳ್ಳುವ ದುಸ್ಸಾಹಸ ಮಾಡಬೇಡಿ.

ಧನು: ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದ್ದು, ಮನಸ್ಸಿಗೆ ಕೊಂಚ ಸಮಾಧಾನವಾಗಲಿದೆ. ಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮನಸ್ಸಿಗೆ ಇಷ್ಟವಾಗುವವರ ಬಳಿ ನಿಮ್ಮ ಮನದಾಳದ ಮಾತು ಹೇಳಿಕೊಳ್ಳಲಿದ್ದೀರಿ.

ಮಕರ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಾನಸಿಕವಾಗಿ ಖುಷಿಕೊಡುವ ಕೆಲಸಗಳನ್ನು ಮಾಡುವಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕುಂಭ: ಯಾವುದೇ ಕೆಲಸಕ್ಕೆ ಹೊರಟರೂ ವಿಘ್ನಸಂತೋಷಿಗಳು ಇದ್ದೇ ಇರುತ್ತಾರೆ. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಸ್ವಂತ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರೆ ಅದರಿಂದ ಉತ್ತಮ ಫಲ ಸದ್ಯದಲ್ಲೇ ನಿರೀಕ್ಷಿಸಬಹದು.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ವಾತಾವರಣ ಕಂಡುಬರಲಿದೆ. ನಿಮ್ಮಿಂದ ನಾಲ್ಕು ಜನರಿಗೆ ಉಪಯೋಗವಾಗುವಂತಹ ಕೆಲಸ ಮಾಡಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಮುಂದಿನ ಸುದ್ದಿ
Show comments