Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 27 ನವೆಂಬರ್ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಲ್ಲವೂ ನೀವಂದುಕೊಂಡಂತೆಯೇ ಕೆಲಸಗಳು ನಡೆದೀತು. ಆದರೆ ನೀವು ನಿರೀಕ್ಷಿಸಿದ ವ್ಯಕ್ತಿಯಿಂದ ನಿರಾಸೆ ಎದುರಿಸಬೇಕಾದೀತು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸಂಗಾತಿಯೊಂದಿಗೆ ಹೊಂದಿಕೊಂಡು ಬಾಳುವುದು ತುಂಬಾ ಮುಖ್ಯ. ಸಂಬಂಧಗಳನ್ನು ಎಚ್ಚರಿಕೆಯಿಂದ ನಿಭಾಯಿಸಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮೇಲೆ ಮೇಲಧಿಕಾರಿಗಳಿಗೆ ಅತಿಯಾದ ಭರವಸೆ ಇರುವುದು. ವಿಶ್ವಾಸ ಉಳಿಸಿಕೊಳ್ಳಿ.

ಮಿಥುನ: ಯಾವುದೇ ವಿಚಾರವಾದರೂ ಆತುರದ ನಿರ್ಧಾರ ಕೈಗೊಳ್ಳಲು ಹೋದರೆ ಕೈ ಸುಟ್ಟುಕೊಳ್ಳಬೇಕಾದೀತು. ಕೃಷಿಕರಿಗೆ ವ್ಯವಹಾರದಲ್ಲಿ ಅಡ್ಡಿ ಆತಂಕಗಳು ಇದ್ದರೂ ಅಂತಿಮವಾಗಿ ಮುನ್ನಡೆ ಸಿಗಲಿದೆ. ಕಿರು ಓಡಾಟ ನಡೆಸುವಿರಿ.

ಕರ್ಕಟಕ: ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡುವುದರಿಂದ ನೆಮ್ಮದಿ ಸಿಗಲಿದೆ. ಬೇರೆಯವರ ಚಾಡಿಮಾತುಗಳಿಗೆ ಅನಗತ್ಯ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲು ಮನಸ್ಸು ಹಾತೊರೆಯಲಿದೆ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ತಪ್ಪದು. ಹಾಗಿದ್ದರೂ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ‍್ಯವಾಗದು. ಚಿಂತೆ ಬೇಡ.

ಕನ್ಯಾ: ಹಣಕಾಸಿನ ಮುಗ್ಗಟ್ಟಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಸಂತಸದ ಸುದ್ದಿ ನಿರೀಕ್ಷಿಸಬಹುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ತುಲಾ: ಕಳೆದು ಹೋದ ವಸ್ತು, ಸಂಬಂಧ ಮರಳಿ ಪಡೆಯಲಾಗದು ಎಂಬುದನ್ನು ಮನಗಾಣಲಿದ್ದೀರಿ. ತಾಳ್ಮೆ, ಸಂಯಮದಿಂದ ವರ್ತಿಸುವುದು ಅಗತ್ಯ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆಉಂಟಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ಹಣಕಾಸಿನ ಖರ್ಚು ವೆಚ್ಚಗಳಿಗೆ ಮಾನಸಿಕವಾಗಿ ಸಿದ್ಧರಾಗಿ. ಹಿಂದೆ ಮಾಡಿದ ಉತ್ತಮ ಕೆಲಸಗಳ ಫಲ ಇಂದು ಸಿಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಿ.

ಧನು: ನಿಮ್ಮ ಮಾತಿನಿಂದಲೇ ಇತರರ ಮನಸ್ಸಿಗೆ ನೋವುಂಟುಮಾಡಲಿದ್ದೀರಿ. ಹಿಂದೆ ಮಾಡಿದ ತಪ್ಪಿಗೆ ಇಂದು ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ.

ಮಕರ: ಮಾನಸಿಕವಾಗಿ ನಿಮ್ಮ ಉತ್ಸಾಹಕ್ಕೆ ಭಂಗ ತರುವ ಘಟನೆಗಳಾದೀತು. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾಗುವುದದರಿಂದ ಚಿಂತೆಯಾಗಲಿದೆ. ಧನಾದಾಯಕ್ಕೆ ಹೊಸ ದಾರಿಗಳನ್ನು ಹುಡುಕಾಡಲಿದ್ದೀರಿ. ತಾಳ್ಮೆಯಿಂದಿರಿ.

ಕುಂಭ: ನಿಮ್ಮ ಯಶಸ್ಸಿಗೆ ಅಡ್ಡಗಾಲು ಹಾಕುವವರ ಬಗ್ಗೆ ಉಪೇಕ್ಷೆ ಬೇಡ. ಹೂಡಿಕೆ ವ್ಯವಹಾರಗಳನ್ನು ಮಾಡಲು ಕೆಲವು ದಿನ ಕಾಯುವುದು ಉತ್ತಮ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರವಾಗಿರಿ.

ಮೀನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಯೋಗ್ಯ ವಯಸ್ಕರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧ ಕೂಡಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ಮಾಡುವಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments