Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 3 ಡಿಸೆಂಬರ್ 2020 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ‍್ಯವಾಗದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲು ಹೊಸ ದಾರಿ ಕಂಡುಕೊಳ್ಳಲಿದ್ದಾರೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಷಭ: ಇತರರ ಬಗ್ಗೆ ನಿಮ್ಮ ಅತಿಯಾದ ಕಾಳಜಿ ಕೆಲವೊಮ್ಮೆ ನಿಮಗೇ ಮುಳುವಾದೀತು. ಎಚ್ಚರಿಕೆಯಿಂದ ಹೆಜ್ಜೆಯಿಡಿ. ಪ್ರೀತಿ ಪಾತ್ರರೊಂದಿಗೆ ಅಧಿಕ ಸಮಯ ಕಳೆಯಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕೊಂಚ ಕಡಿವಾಣವಿರಲಿ.

ಮಿಥುನ: ಸಾಮಾಜಿಕವಾಗಿ ನಿಮ್ಮ ಕೀರ್ತಿ, ಸ್ಥಾನ ಮಾನ ಹೆಚ್ಚಲಿದೆ. ಒಳಿತು ಕೆಡಕು ಎರಡನ್ನೂ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಯೋಗ್ಯ ವಯಸ್ಕರಿಗೆ ತಕ್ಕ ಸಂಬಂಧಗಳು ಕೂಡಿಬರಲಿವೆ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶ ತೋರಿಬರಲಿದೆ.

ಕರ್ಕಟಕ: ವೈಯಕ್ತಿಕವಾಗಿ ನೀವು ಮಾಡುವ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡರೆ ಉತ್ತಮ. ಉದ್ಯೋಗ, ವ್ಯವಹಾರ ವಿಚಾರದಲ್ಲಿ ಮುನ್ನಡೆಗೆ ಅವಕಾಶ ತೋರಿಬರಲಿದೆ. ಬಳಸಿಕೊಳ್ಳಿ.

ಸಿಂಹ: ಎಂಥಾ ಕಷ್ಟವೇ ಆದರೂ ಎದುರಿಸುವ ತಾಳ್ಮೆ, ಛಲ ಮೈಗೂಡಿಸಿಕೊಳ್ಳಬೇಕಾಗುತ್ತದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಉಳಿಸಿಕೊಳ್ಳುವ ಅನಿವಾರ್ಯತೆ ಎದುರಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ: ಹೊಸಬರ ಸಹವಾಸದಿಂದ ನಿಮ್ಮ ವ್ಯವಹಾರದ ಬಗ್ಗೆ ಹೊಸ ಯೋಜನೆಗಳು ಸಿಗಲಿವೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗವಿದೆ. ಅನಿವಾರ್ಯವಾಗಿ ದೂರ ಸಂಚಾರ ರದ್ದುಗೊಳಿಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ವೈಯಕ್ತಿಕವಾಗಿ ನಿಮ್ಮಿಂದ ಉಪಕಾರ ಪಡೆದವರು ಇಂದು ನಿಮ್ಮ ಕಷ್ಟಕ್ಕೆ ನೆರವಾಗಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ವಾಹನ ಸವಾರರು ಪ್ರಯಾಣದಲ್ಲಿ ಎಚ್ಚರವಾಗಿರುವುದು ಉತ್ತಮ.

ವೃಶ್ಚಿಕ: ವ್ಯಾಪಾರ, ವ್ಯವಹಾರದಲ್ಲಿ ಹೊಸ ಒಪ್ಪಂದ ಮಾಡಿಕೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಹೆಜ್ಜೆಯಿಡಿ. ನೆರೆಹೊರೆಯವರು ನಿಮ್ಮ ಕಷ್ಟಕ್ಕೆ ಆಗಿಬರಲಿದ್ದಾರೆ. ನೂತನ ದಂಪತಿಗಳ ನಡುವೆ ಹೊಂದಾಣಿಕೆ ಕೊರತೆ ಉಂಟಾಗಬಹುದು. ತಾಳ್ಮೆಯಿರಲಿ.

ಧನು: ದುಡುಕಿ ಮಾತನಾಡಿ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ನಿಮ್ಮ ಆರೋಗ್ಯ ಸಮಸ್ಯೆಗೆ ತಕ್ಕಮಟ್ಟಿನ ಪರಿಹಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ದೂರದೂರಿಗೆ ಪ್ರಯಾಣ ಮಾಡಬೇಕಾಗಿ ಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಕರ: ಮನೋಕಾಮನೆಗಳನ್ನು ಪೂರ್ತಿ ಮಾಡಲು ಧನವ್ಯಯ ಮಾಡಲಿದ್ದೀರಿ. ಬಹಳ ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತಸ ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ನಿಮ್ಮ ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಕೌಟುಂಬಿಕ ವ್ಯವಹಾರಗಳ ಬಗ್ಗೆ ಏಕಾಂಗಿ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಗೃಹಿಣಿಯರಿಗೆ ಗೃಹ ಕೃತ್ಯಗಳಿಂದ ಕೊಂಚ ವಿರಾಮ ಸಿಗುವುದು. ಮಕ್ಕಳಿಂದ ಸಂತಸ ಸಿಗಲಿದೆ.

ಮೀನ: ಮಾನಸಿಕವಾಗಿ ನಿರಾಶಾಮನೋಭಾವ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯ ಭೀತಿ ಎದುರಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿ.

Share this Story:

Follow Webdunia kannada

ಮುಂದಿನ ಸುದ್ದಿ

ದಿನ ಪಂಚಾಂಗ ಹೀಗಿದೆ!