Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 5 ಡಿಸೆಂಬರ್ 2020 (08:51 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗದಲ್ಲಿರುವ ಸಮಸ್ಯೆಗಳಿಗೆ ನೀವೇ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ನಿಮ್ಮ ಮನದಾಳದ ಆಸೆಯನ್ನು ಹಂಚಿಕೊಳ್ಳಲಿದ್ದೀರಿ. ಮಕ್ಕಳ ವಿಚಾರದಲ್ಲಿ ಕಾಳಜಿ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಬಗ್ಗೆ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸುವುರಿ.

ವೃಷಭ: ವೃತ್ತಿರಂಗದಲ್ಲಿ ಹೊಸ ಅವಕಾಶಗಳನ್ನು ಹುಡುಕಿಕೊಂಡು ಹೋಗಲಿದ್ದೀರಿ. ಆರ್ಥಿಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಇದು ಸಕಾಲ. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲಿದ್ದೀರಿ.

ಮಿಥುನ: ನಿಮ್ಮ ಇಚ್ಛೆಯ ಪ್ರಕಾರ ಕೆಲಸ ಕಾರ್ಯಗಳು ನಡೆಯದೇ ಮನಸ್ಸಿಗೆ ಬೇಸರವಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಅನಿರೀಕ್ಷಿತವಾಗಿ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ನಿಮ್ಮ ಬಗ್ಗೆ ಬಂಧು ಮಿತ್ರರಲ್ಲಿ ತಪ್ಪು ಅಭಿಪ್ರಾಯ ಮೂಡುವಂತಹ ಘಟನೆಗಳಾದೀತು. ವೈವಾಹಿಕ ಪ್ರಸ್ತಾಪಗಳಿಗೆ ಮುನ್ನಡೆ ಸಿಗಲಿದೆ. ಸರಕಾರಿ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ.

ಸಿಂಹ: ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಪ್ರೀತಿ ಪಾತ್ರರ ಬೇಡಿಕೆಗಳಿಗೆ ಸ್ಪಂದಿಸಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಕಂಡುಬಂದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಶ್ರೀದೇವತಾ ಕಾರ್ಯಗಳಿಗೆ ಕಾಲ ಕೂಡಿಬರಲಿದೆ. ಕುಟುಂಬದವರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ನಿಮ್ಮ ಕೆಲವೊಂದು ಹೊಸ ನಿರ್ಧಾರಗಳನ್ನು ಬಹಿರಂಗಗೊಳಿಸುವ ಕಾಲ ಬಂದಿದೆ. ಸಂಗಾತಿಯ ಸಹಕಾರದಿಂದ ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದೆ.

ತುಲಾ: ನೆರೆಹೊರೆಯವರ ಚಾಡಿ ಮಾತುಗಳು ಮನಸ್ಸಿಗೆ ಬೇಸರವುಂಟು ಮಾಡಲಿದೆ. ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವುದನ್ನು ಮರೆಯದಿರಿ. ಅಪರಿಚಿತರನ್ನು ನಂಬಿ ವ್ಯವಹಾರದಲ್ಲಿ ಹೂಡಿಕೆ ಮಾಡಲು ಹೋಗಬೇಡಿ. ದೇವತಾ ಪ್ರಾರ್ಥನೆ ಮರೆಯದಿರಿ.

ವೃಶ್ಚಿಕ: ನಿಮ್ಮ ಸಮೀಪದವರೇ ನಿಮ್ಮ ಮಾತಿಗೆ ಬೆಲೆಕೊಡದಿದ್ದಾಗ ಬೇಸರವಾಗುವುದು ಸಹಜ. ಆದರೆ ಎಲ್ಲವನ್ನೂ ಆತ್ಮಸ್ಥೈರ್ಯದಿಂದ ಎದುರಿಸುವುದು ಅಗತ್ಯ.  ಎಷ್ಟೇ ತೊಂದರೆಯಾದರೂ ಸಂಗಾತಿಯ ಸಹಕಾರವಿರುವುದರಿಂದ ಮನಸ್ಸಿಗೆ ಧೈರ್ಯ ಬರಲಿದೆ.

ಧನು: ವೃತ್ತಿರಂಗದಲ್ಲಿ ಸ್ಥಾನಪಲ್ಲಟ ಭೀತಿಯಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳನ್ನು ನಿಭಾಯಿಸಲು ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಮಕರ: ಆಗಾಗ ಆರ್ಥಿಕವಾಗಿ ಏರುಪೇರಾಗುವ ಸಾಧ್ಯತೆಯಿದೆ. ಎಲ್ಲದಕ್ಕೂ ಸಿದ್ಧರಾಗಿರಬೇಕು. ಹಿತಶತ್ರುಗಳ ಕಾಟದಿಂದ ಸಣ್ಣ ಪುಟ್ಟ ತೊಂದರೆಗಳು ಎದುರಾದೀತು. ಸಾಂಸಾರಿಕವಾಗಿ ಮನದೆನ್ನೆಯ ಮಾತುಗಳಿಗೆ ಬೆಲೆ ಕೊಡಲೇಬೇಕಾಗುತ್ತದೆ.

ಕುಂಭ: ಆರ್ಥಿಕವಾಗಿ ನಾನಾ ಖರ್ಚು ವೆಚ್ಚಗಳು ಎದುರಾಗಲಿವೆ. ಕೌಟುಂಬಿಕ ಸಮಸ್ಯೆಗಳನ್ನು ನಾಜೂಕಾಗಿ ಬಗೆಹರಿಸಿಕೊಳ್ಳಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾಗುವುದು. ಯೋಗ್ಯ ವಯಸ್ಕರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿದೆ.

ಮೀನ: ನೂತನ ದಂಪತಿಗಳಿಗೆ ಶೀಘ‍್ರದಲ್ಲೇ ಸಂತಾನ ಫಲ ಯೋಗವಿದೆ. ಬೇಡದ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸು ಹಾಳು ಮಾಡಿಕೊಳ್ಳಬೇಡಿ. ಆರ್ಥಿಕವಾಗಿ ಧನಾದಾಯ ಉತ್ತಮವಾಗಿರಲಿದೆ. ಸದ್ಯದಲ್ಲೇ ವಾಹನ ಖರೀದಿ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments