Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 7 ಡಿಸೆಂಬರ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೈಗೆ ಬಂದ ಅವಕಾಶಗಳನ್ನು ತಾನಾಗಿಯೇ ಕೈ ಚೆಲ್ಲಬೇಡಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಪಡೆಯುವ ಅವಕಾಶವಿದೆ. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಪಡೆಯಿರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮೇಲಿನ ಹಂತಕ್ಕೆ ಏರುವ ಅವಕಾಶ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ

ಮಿಥುನ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಾರ್ಯಸಾಧನೆಯಾಗಬೇಕಾದರೆ ಓಡಾಟ ನಡೆಸಬೇಕಾಗುತ್ತದೆ. ಸರಕಾರಿ ದಾಖಲೆ ಪತ್ರಗಳನ್ನು ಎಚ್ಚರಿಕೆಯಿಂದ ಸಂರಕ್ಷಿಸಿ. ಭೂಮಿ, ಮನೆ ಖರೀದಿಗೆ ಸಕಾಲ. ಆದಾಯಕ್ಕೆ ಕೊರತೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ಕರ್ಕಟಕ: ನಿರುದ್ಯೋಗಿಗಳು ಬಹುದಿನಗಳಿಂದ ಆಸೆಪಡುತ್ತಿದ್ದ ಉದ್ಯೋಗಾವಕಾಶ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ಹಿತಶತ್ರುಗಳ ವಂಚನೆ ಬೆಳಕಿಗೆ ಬರಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸುವ ಯೋಗ. ವಿದ್ಯಾರ್ಥಿಗಳು ನಿರೀಕ್ಷಿತ ಫಲ ಪಡೆಯಲಿದ್ದಾರೆ. ಮನಸ್ಸಿಗೆ ಸಂತಸವಾಗಲಿದೆ.

ಕನ್ಯಾ: ಎಷ್ಟೋ ದಿನದಿಂದ ಅಂದುಕೊಂಡಿದ್ದ ಕೆಲಸಗಳನ್ನು ಇಂದು ನೆರವೇರಿಸಲು ಮುಂದಾಗುವಿರಿ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.

ತುಲಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರುಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಹಂತ ಹಂತವಾಗಿ ಸುಧಾರಣೆ ಕಂಡುಬರಲಿದೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ಸಾಹ ಭಂಗ ತರುವ ಘಟನೆಗಳು ಎದುರಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತೆಗಳನ್ನು ದೂರ ಮಾಡಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕೆಲವು ಪ್ರಮುಖರ ಭೇಟಿ ಸಂಭವ.

ಧನು: ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆ ಮಾಡಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚು ಪರಿಶ್ರಮ ಪಡಬೇಕಾಗಬಹುದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಮಕರ: ವೃತ್ತಿರಂಗದಲ್ಲಿ ನಿಮ್ಮ ಯಶಸ್ಸಿಗೆ ತೊಡಕುಂಟುಮಾಡುವವರ ಬಗ್ಗೆ ಎಚ್ಚರವಿರಲಿ. ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆಯಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಭೇಟೆಗೆ ಅಲೆದಾಟ ತಪ್ಪದು. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಕುಂಭ: ನಿಮ್ಮ ಕೆಲಸ ಕಾರ್ಯದ ಬಗ್ಗೆ ಮಾತ್ರ ಗಮನಹರಿಸಿದರೆ ಸಾಕು. ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋದರೆ ಅವಮಾನ ಎದುರಿಸಬೇಕಾದೀತು. ಯಂತ್ರೋಪಕರಣ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಒಳ್ಳೆಯ ಕೆಲಸ ಆರಂಭಿಸಲು ಹಿಂದೆ ಮುಂದೆ ನೋಡುತ್ತಾ ಕೂರಬೇಡಿ. ನಿಮ್ಮ ನೇರ ನುಡಿ ಕೆಲವರಿಗೆ ಇಷ್ಟವಾಗದೇ ಹೋಗಬಹುದು. ಆದರೆ ಚಿಂತೆ ಮಾಡಬೇಡಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments