Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 9 ಡಿಸೆಂಬರ್ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆದಾಯಕ್ಕೆ ಕೊರತೆಯಿಲ್ಲದಿದ್ದರೂ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ವೃತ್ತಿರಂಗದಲ್ಲಿ ಸದವಕಾಶಗಳು ಬಂದಾಗ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ಅನ್ಯರ ವಿಚಾರಕ್ಕೆ ಅನಗತ್ಯ ತಲೆಕೆಡಿಸಿಕೊಳ್ಳುವುದು ಬೇಡ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ.

ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರ ಮನಸ್ಸಿಗೆ ಬೇಸರವುಂಟು ಮಾಡೀತು. ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಪ್ರಯಾಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತಿಗೇರುವ ಅವಕಾಶ ಸಿಗಲಿದೆ.

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿಯ ಸುಯೋಗ ಎದುರು ಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಮುನ್ನಡೆ ಕಾಣಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಗೊಂದಲದಲ್ಲಿರುವ ನಿಮಗೆ ನಿರ್ಧಾರ ತೆಗೆದುಕೊಳ್ಳುವ ಮಿತ್ರರು ಕೊಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಸ್ವಯಂ ವ್ಯವಹಾರಗಳಿಂದ ಲಾಭವಾಗಬಹುದು.

ತುಲಾ: ಮನೆಯಲ್ಲಿ ಕಲಹ, ಅಶಾಂತಿಯ ವಾತಾವರಣ ಕಂಡುಬಂದೀತು. ಭಿನ್ನಾಭಿಪ್ರಾಯಗಳಾಗದಂತೆ ಆದಷ್ಟು ಮಾತಿನ ಮೇಲೆ ನಿಗಾ ವಹಿಸಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಶ್ಚಿಕ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಿದ ಖುಷಿ ನಿಮ್ಮದಾಗಲಿದೆ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗಿ ಬಂದೀತು. ವಾಹನ ಚಾಲನೆಯಲ್ಲಿ ಎಚ್ಚರಿಕೆಯಿರಲಿ.

ಧನು: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರದಿರಿ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ಹಿತಶತ್ರುಗಳ ವಂಚನೆ ಬೆಳಕಿಗೆ ಬರಲಿದೆ. ಸ್ವಯಂ ಉದ್ಯೋಗಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಅನಗತ್ಯ ಚಿಂತೆ ಬೇಡ.

ಮಕರ: ನಿಮ್ಮ ಕೆಲವೊಂದು ನಿರ್ಧಾರಗಳಿಂದ ಆಪ್ತರ ಪಾಲಿಗೆ ನಿಷ್ಠುರರಾಗಬೇಕಾಗುತ್ತದೆ. ನೂತನ ದಂಪತಿಗಳಲ್ಲಿರುವ ಹೊಂದಾಣಿಕೆ ಸಮಸ್ಯೆಗಳು ಮನಸ್ಸು ಬಿಚ್ಚಿ ಮಾತನಾಡುವುದರಿಂದ ಪರಿಹಾರವಾಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿ.

ಕುಂಭ: ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಹಿನ್ನಡೆಯ ಭೀತಿ ಎದುರಾದೀತು. ಆರ್ಥಿಕವಾಗಿ ಹಿತ ಮಿತವಾಗಿ ಖರ್ಚು ಮಾಡುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಅನಿರೀಕ್ಷಿತವಾಗಿ ಭೇಟಿಯಾಗುವ ಮಿತ್ರರಿಂದ ಮನಸ್ಸಿಗೆ ಖುಷಿಯಾಗಲಿದೆ.

ಮೀನ: ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಲಿದ್ಧೀರಿ. ಮಕ್ಕಳ ವಿಚಾರದಲ್ಲಿ ಭವಿಷ್ಯದ ಯೋಜನೆಗಳನ್ನು ರೂಪಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments