Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 10 ಡಿಸೆಂಬರ್ 2020 (09:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದೂರ ಪ್ರಯಾಣದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಯಾವುದೇ ಅಡ್ಡಿ ಆತಂಕವಾಗದು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಸರಿಯಾದ ಲೆಕ್ಕಾಚಾರವಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶ ಸಿಗಲಿದೆ.

ವೃಷಭ: ಹಿರಿಯರಿಗೆ ತಮ್ಮ ಕೆಲಸಗಳಿಗೆ ಇತರರ ಮೇಲೆ ಅವಲಂಬಿಸುವುದು ಅಸಹನೀಯವಾಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕೆ ಐಡಿಯಾಗಳು ಸಿಗಲಿವೆ.

ಮಿಥುನ: ಸ್ವಯಂ ವ್ಯಾಪಾರಿಗಳಿಗೆ ಹಿತಶತ್ರುಗಳಿಂದ ವಂಚನೆಯಾಗುವ ಸಾಧ್ಯತೆಯಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೆಲಸದಲ್ಲಿ ಯಶಸ್ಸು ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ಕ್ರಿಯಾತ್ಮಕವಾಗಿ ಯೋಚನೆ ಮಾಡುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿಂದೆ ಹೂಡಿದ್ದ ಬಂಡವಾಳಕ್ಕೆ ಇಂದು ತಕ್ಕ ಬೆಲೆ ಸಿಗಲಿದೆ. ಇಷ್ಟಮಿತ್ರರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು.

ಕನ್ಯಾ: ಸಂಗಾತಿಯಿಂದ ಶುಭ ನುಡಿ ಕೇಳಿಬರಲಿದೆ. ಸಾಂಸಾರಿಕವಾಗಿ ಸಂತೋಷದ ದಿನಗಳಿವು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸರಕಾರಿ ಅಧಿಕಾರಿಗಳಿಗೆ ಕೆಲಸದೊತ್ತಡವಿರಲಿದೆ. ಹಾಗಿದ್ದರೂ ಮುನ್ನಡೆಗೆ ಅಡ್ಡಿಯಿರದು.

ತುಲಾ: ಮನಸ್ಸು ಬಯಸಿದ್ದನ್ನು ಪಡೆಯಲು ಕಷ್ಟಪಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಿಮ್ಮ ಹಣಕಾಸಿನ ಮುಗ್ಗಟ್ಟು ಸರಿದೂಗಿಸಲು ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಕುಲದೇವರಪ್ರಾರ್ಥನೆ ಮಾಡಿ.

ವೃಶ್ಚಿಕ: ನೂತನ ದಂಪತಿಗಳಿಗೆ ಸಂತೋಷಕರ ದಿನವಾಗಲಿದೆ. ಹೊಸ ಸ್ಥಳಗಳಿಗೆ ಭೇಟಿ ಕೊಡಲಿದ್ದೀರಿ. ಹೊಸ ಸಂಬಂಧಗಳು ಬೆಳೆಯಲಿವೆ. ಕಾರ್ಯರಂಗದಲ್ಲಿ ನಿಮ್ಮ ಮುನ್ನಡೆಗೆ ಅಡೆತಡೆಗಳು ಬಂದೀತು. ನಿಭಾಯಿಸಿಕೊಂಡು ಹೋಗಬೇಕಿದೆ.

ಧನು: ಅನಗತ್ಯ ವಿಚಾರಗಳ ಬಗ್ಗೆ ನೀವು ತಲೆಕಡಿಸಿಕೊಂಡು ಸಂಗಾತಿಯ ನೆಮ್ಮದಿಯನ್ನೂ ಹಾಳು ಮಾಡಬೇಡಿ. ನಿಮ್ಮ ಅತಿಯಾದ ಮಾತಿಗೆ ಕಡಿವಾಣ ಹಾಕಿದರೆ ಉತ್ತಮ. ಬಂಧುಮಿತ್ರರ ಭೇಟಿಯಾಗುವ ಸಾಧ‍್ಯತೆ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಅಧಿಕ ಧನಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ಸಂತಾನರಹಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ಕುಂಭ: ಬೇರೆಯವರ ಕಷ್ಟಕ್ಕೆ ನೆರವಾಗುವ ನಿಮ್ಮ ಗುಣ ಮುಂದೆ ನಿಮ್ಮ ಕೈ ಹಿಡಿಯಲಿದೆ. ಹೊಸ ಯೋಜನೆಗಳ ಕುರಿತು ಹೆಜ್ಜೆ ಹಾಕುವಾಗ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕು. ಅನಿವಾರ್ಯವಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ದಾಯಾದಿಗಳ ನಡುವೆ ಕಲಹ ಮನಸ್ಸಿಗೆ ಕಿರಿ ಕಿರಿ ಉಂಟುಮಾಡಲಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ದೂರ ಪ್ರಯಾಣ ಮಾಡಬೇಕಾಗಿ ಬರಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ತಾಳ್ಮೆ, ಸಂಯಮವಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments