Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 18 ಡಿಸೆಂಬರ್ 2020 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಯೋಚನೆಗಳಿಗೆ ಬೆಂಬಲ ಸಿಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ವೃಷಭ: ಕಾರ್ಯನಿಮಿತ್ತವಾಗಿ ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಮನೆಯಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಿಥುನ: ನಿಮ್ಮ ಬೆಲೆ ಬಾಳುವ ವಸ್ತುಗಳ ಮೇಲೆ ಬೇರೆಯವರ ದೃಷ್ಟಿ ಬೀಳಲಿದೆ. ಎಚ್ಚರಿಕೆಯಿಂದ ಕಾಪಾಡಿ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ವಹಿಸಿ.

ಕರ್ಕಟಕ: ಮನಸ್ಸಿನ ಆಸೆ ಪೂರೈಸಲು ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗವಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಸಿಂಹ: ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಒಳಿತು. ಮಿತ್ರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಕೂಡಿಡುವ ಯೋಚನೆಗಳು ಬರಲಿವೆ. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹಲವು ಅವಕಾಶಗಳು ಎದುರಾಗಲಿದ್ದು, ಯಾವುದನ್ನು ಬಳಸಬೇಕು ಎಂಬ ಗೊಂದಲಗಳು ಕಾಡೀತು. ಸಂಗಾತಿಯ ಅಭಿಪ್ರಾಯಗಳು ಮುಖ್ಯವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು.

ತುಲಾ: ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬಂದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಕೆಲಸ ಕಾರ್ಯಗಳಿಗೆ ನಿರುತ್ಸಾಹ ಕಂಡುಬಂದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕೆಲಸಗಳು ಯಶಸ್ವಿಯಾಗಲಿದೆ. ಚಿಂತೆ ಬೇಡ.

ಧನು: ಮನೆಯಲ್ಲಿ ಧನ ದಾನ್ಯಾದಿ ಸಂಪತ್ತು ವೃದ್ಧಿಯಾಗಲಿದೆ. ಸರಿಯಾದ ನಿರ್ಧಾರ ಕೈಗೊಂಡರೆ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗದು. ಪ್ರೀತಿ ಪಾತ್ರರ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಕಿರು ಓಡಾಟ ನಡೆಸಬೇಕಾಗಬಹುದು.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುವವರನ್ನು ದೂರವಿಡುವುದೇ ಉತ್ತಮ. ಸರಕಾರಿ ಅಧಿಕಾರಿಗಳಿಗೆ ಕಾರ್ಯದೊತ್ತಡವಿರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾದೀತು.

ಕುಂಭ: ದೇಹಾರೋಗ್ಯದ ಬಗ್ಗೆ ಅತೀವ ಕಾಳಜಿವಹಿಸಬೇಕಾದ ಸಮಯವಿದು. ಹಿತಶತ್ರುಗಳ ಹುನ್ನಾರಗಳು ಬೆಳಕಿಗೆ ಬರಲಿವೆ. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ವಹಿಸುವುದು ಅಗತ್ಯ.

ಮೀನ: ಅನಗತ್ಯ ಮಾತು, ಚಿಂತನೆಗಳಿಗೆ ಕಿವಿಗೊಡುವುದನ್ನು ಬಿಟ್ಟು, ನಿಮ್ಮ ಮನಸ್ಸಿನ ಮಾತಿನಂತೆ ನಡೆದುಕೊಳ್ಳಿ. ಸಂಗಾತಿಯ ಆಯ್ಕೆ ವಿಚಾರದಲ್ಲಿ ಗೊಂದಲಗಳು ಕಾಡೀತು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

Share this Story:

Follow Webdunia kannada

ಮುಂದಿನ ಸುದ್ದಿ

ದಿನ ಪಂಚಾಂಗ ಹೀಗಿದೆ!