ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 24 ಡಿಸೆಂಬರ್ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ತಾಳ್ಮೆಯ ನಡೆಯೇ ನಿಮ್ಮ ಯಶಸ್ಸಿಗೆ ಮುನ್ನುಡಿ ಬರೆಯಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಮಾಡಿದ ಕೆಲಸಕ್ಕೆ ತಕ್ಕ ಫಲ ಸಿಗಲಿದೆ.

ವೃಷಭ: ದೈಹಿಕವಾಗಿ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿಂದೆ ಮಾಡಿದ ತಪ್ಪಿಗೆ ಫಲ ಅನುಭವಿಸುವವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಮಿಥುನ: ಭೂ ಸಂಬಂಧಿ ವ್ಯವಹಾರಗಳು, ವ್ಯಾಜ್ಯಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ.

ಕರ್ಕಟಕ: ಬದುಕು ಕಟ್ಟಿಕೊಳ್ಳುವ ನಿಮ್ಮ ಪ್ರಯತ್ನಕ್ಕೆ ಸಂಗಾತಿಯ ಸಾಥ್ ಸಿಗಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ನೆರೆಹೊರೆಯವರ ಚಾಡಿಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ತಾಳ್ಮೆಯಿರಲಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಬಯಸಿದ ಸ್ಥಾನ ಮಾನ ನಿಮ್ಮದಾಗುವುದು. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿ ಹೋಗಬಹುದು. ಹಾಗಿದ್ದರೂ ನಿರಾಸೆ ಬೇಡ. ಉತ್ತಮ ದಿನಗಳು ಮುಂದಿದೆ.

ಕನ್ಯಾ: ಬದುಕಿನಲ್ಲಿ ಆಶಾವಾದಿಯಾಗಿರುವುದು ತುಂಬಾ ಮುಖ್ಯ. ಕೈಗೆ ಸಿಕ್ಕ ಭಾಗ್ಯ ಬಾಯಿಗೆ ಬರಲಿಲ್ಲವೆಂದು ನಿರಾಶೆಯಾಗಬೇಡಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಸಾಂಸಾರಿಕವಾಗಿ ನೆಮ್ಮದಿಯಿರುವುದು.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಅಡ್ಡಿ ಮಾಡುವವರ ಹುನ್ನಾರಗಳು ಬೆಳಕಿಗೆ ಬರಲಿವೆ. ಪ್ರೀತಿ ಪಾತ್ರರಿಗೆ ನಿಮ್ಮ ಮನಸ್ಸಿನ ಭಾವನೆಗಳನ್ನು ಹೇಳಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ದೈವಾನುಕೂಲದಿಂದ ವ್ಯಾವಹಾರಿಕವಾಗಿ ಇಂದು ನೀವು ಕೈ ಹಿಡಿಯಲಿರುವ ಕೆಲಸಗಳೆಲ್ಲವೂ ಯಶಸ್ವಿಯಾಗಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು, ಆದರೆ ದುಂದು ವೆಚ್ಚ ಬೇಡ. ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಧನು: ನಿಮ್ಮ ತಪ್ಪಿಗೆ ತಕ್ಕ ಬೆಲೆ ತೆರಲಿದ್ದೀರಿ. ಮಾತಿನ ಮೇಲೆ ನಿಗಾ ಇಲ್ಲದಿದ್ದರೆ ಇತರರ ನಿಷ್ಠುರಕ್ಕೆ ಕಾರಣವಾಗಬೇಕಾದೀತು. ಕೆಳಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ತಾಳ್ಮೆಯಿರಲಿ.

ಮಕರ: ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಶರಾಗಬಹುದು. ಆದರೆ ನಿಮ್ಮ ಪ್ರಯತ್ನ ಕೈ ಬಿಡಬೇಡಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕುಂಭ: ಯಾರದೋ ತಪ್ಪಿಗೆ ನೀವು ಬಲಿಪಶುವಾಗುವಂತಹ ಪರಿಸ್ಥಿತಿ ಎದುರಾಗಬಹುದು. ಆದರೆ ಕೌಟುಂಬಿಕವಾಗಿ ಕುಟುಂಬ ಸದಸ್ಯರ ಬಲದಿಂದ ನಿಮ್ಮ ಕಷ್ಟಗಳು ಪರಿಹಾರವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ.

ಮೀನ: ನಿಮ್ಮ ಬಗ್ಗೆ ಯಾರು ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ನಿಮ್ಮ ಮನಸ್ಸಿಗೆ ಹಿಡಿಸಿದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments