ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 26 ಡಿಸೆಂಬರ್ 2020 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನಲ್ಲೇ ಕೆಲವೊಂದು ವಿಚಾರಗಳನ್ನಿಟ್ಟುಕೊಂಡು ಕೊರಗುವ ಬದಲು ಹೇಳಿಕೊಂಡು ಹಗುರವಾಗುವುದು ಉತ್ತಮ. ಹಿರಿಯರ ಉಪದೇಶಗಳು ಹಿಡಿಸದೇ ಹೋಗಬಹುದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ವೃಷಭ: ನಿಮ್ಮ ಕ್ರಿಯಾಶೀಲತೆಗೆ ತಕ್ಕ ಮನ್ನಣೆ ಸಿಗಲಿದೆ. ಭವಿಷ್ಯದ ಯೋಜನೆಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತಲೆದೋರಿತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಅನಿರೀಕ್ಷಿತವಾಗಿ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಹಿನ್ನಡೆಯ ಭೀತಿ ಉಂಟಾಗಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳನ್ನು ಬಿಡುವುದು ಉತ್ತಮ. ವೃತ್ತಿರಂಗದಲ್ಲಿ ತೊಡಕುಗಳಿದ್ದರೂ ಮುನ್ನಡೆಯಿರಲಿದೆ.

ಕರ್ಕಟಕ: ಕಾರ್ಯನಿಮಿತ್ತ ವಾಹನದಲ್ಲಿ ಓಡಾಟ ನಡೆಸುವಾಗ ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಭಿನ್ನಾಭಿಪ್ರಾಯಗಳುಂಟಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಕಾರ್ಯರಂಗದಲ್ಲಿ ಶತ್ರು ಬಾಧೆ ಇರಲಿದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ನಿಮ್ಮದಲ್ಲದ ವಸ್ತುಗಳ ಬಗ್ಗೆ ಅತಿಯಾದ ಮೋಹ ಒಳ್ಳೆಯದಲ್ಲ. ಮಿತ್ರರ ಭೇಟಿಯಾಗುವ ಯೋಗವಿದೆ. ಇಷ್ಟ ಭೋಜನ ಸವಿಯಲಿದ್ದೀರಿ.

ಕನ್ಯಾ: ನಿಮ್ಮ ಆಯ್ಕೆಯ ಕ್ಷೇತ್ರದ ಬಗ್ಗೆ ನಿಮಗೇ ಅನುಮಾನಗಳಾದೀತು. ಸಂಗಾತಿಯ ಸೂಕ್ತ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ತುಲಾ: ನಿಮ್ಮ ಜೀವನದ ನಿರ್ಧಾರಗಳನ್ನು ಇತರರು ಮಾಡುವಂತಹ ಪರಿಸ್ಥಿತಿ ತಂದುಕೊಳ್ಳಬೇಡಿ. ಆತ್ಮವಿಶ್ವಾಸದಿಂದ ಮುನ್ನುಗ್ಗಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಹೊಳೆಯಲಿವೆ. ಹಿರಿಯರಿಗೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿಕೊಳ್ಳಿ. ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಬಹಳ ದಿನಗಳ ನಂತರ ಇಷ್ಟಮಿತ್ರರ ಭೇಟಿಯಾಗುವ ಖುಷಿ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಸಹಕಾರಿಯಾಗುವ ವಾತಾವರಣವಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳದ್ದೀತು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲಿದ್ದೀರಿ.

ಮಕರ: ಮನದೆನ್ನೆಯ ಮಾತುಗಳಿಗೆ ಕಿವಿಗೊಡದೇ ಇದ್ದರೆ ಸಾಂಸಾರಿಕವಾಗಿ ಕಲಹಗಳು ಗ್ಯಾರಂಟಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ. ಮೆಚ್ಚಿನ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರನ್ನು ಭೇಟಿಯಾಗುವ ಯೋಗ ಸದ್ಯದಲ್ಲೇ ಕೂಡಿಬರುವುದು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕುವುದು ಉತ್ತಮ.

ಮೀನ: ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರಿಗೆ ಹಿಡಿಸದೇ ಹೋಗಬಹುದು. ನಿರುದ್ಯೋಗಿಗಳು ಇಟ್ಟ ಹೆಜ್ಜೆಯನ್ನು ಹಿಂದಡಿಯಿಡಬೇಡಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments