Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 29 ಡಿಸೆಂಬರ್ 2020 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಎಲ್ಲಾ ಸಮಸ್ಯೆಗಳು ಮೇಲ್ನೋಟಕ್ಕೆ ಸರಿಯಾಗಿದೆ ಎಂಬ ಭಾವನೆ ಬಂದೀತು. ಆದರೆ ನಿಮ್ಮ ಎಚ್ಚರಿಕೆಯಲ್ಲಿ ನೀವಿದ್ದರೆ ಉತ್ತಮ. ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕೌಟುಂಬಿಕವಾಗಿ ನಿಮ್ಮ ಮಾತುಗಳನ್ನು ಆಲಿಸುವವರಿಲ್ಲ ಎಂಬ ಬೇಸರ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮುನ್ನಡೆ ಸಿಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ಆದರೆ ಸ್ವಯಂ ವೃತ್ತಿಯಿಂದ ಲಾಭ ಕಂಡುಕೊಳ್ಳಬಹುದು. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಮನಸ್ಸಿಗೆ ಇಷ್ಟವಾದವರ ಜತೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿ ಕಾರ್ಯಗಳಿಂದ ಮನಸ್ಸಿಗೆ ಸಂತಸ ಸಿಗಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಚೇತರಿಕೆ ಕಾಣುವರು. ಅನಗತ್ಯ ವಿಚಾರಕ್ಕೆ ಚಿಂತೆ ಬೇಡ.

ಸಿಂಹ:  ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದ್ದು, ಕೀರ್ತಿ ಸಂಪಾದಿಸುವ ಯೋಗವಿದೆ. ಮಹಿಳೆಯರಿಗೆ ವಿಲಾಸೀ ಸಾಮಗ್ರಿಗಳ ಖರೀದಿ ಯೋಗವಿದೆ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ. ಅನಿರೀಕ್ಷಿತವಾಗಿ ಕಾರ್ಯಸಾಧನೆಯಾಗುವುದು.

ಕನ್ಯಾ: ಬೇರೆಯವರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ವಿದೇಶ ಯಾನದ ಅವಕಾಶ ಸ್ವಲ್ಪದರಲ್ಲೇ ಕೈತಪ್ಪಿ ಹೋಗಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಕೈಗೆ ಬಂದ ಅವಕಾಶಗಳು ಬಾಯಿಗೆ ಬರುವಷ್ಟರಲ್ಲಿ ತಪ್ಪಿ ಹೋದ ನಿರಾಸೆಯಾದೀತು. ಆದರೆ ಬಂದಿದ್ದನ್ನು ಬಂದ ಹಾಗೆ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ಕೃಷಿಕರಿಗೆ ಮುನ್ನಡೆಯ ಯೋಗವಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ಧನು: ಹಣಕಾಸಿನ ವಿಚಾರವಾಗಿ ಬಂಧುವರ್ಗದವರೊಂದಿಗೆ ಮನಸ್ತಾಪ ಕಂಡುಬಂದೀತು. ಹಿರಿಯರ ಸಲಹೆಗಳನ್ನು ಪಾಲಿಸಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಸರಕಾರಿ ನೌಕರರಿಗೆ ಕಾರ್ಯದೊತ್ತಡ ತಪ್ಪದು.

ಮಕರ: ಭವಿಷ್ಯದ ಯೋಜನೆಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಕೆಲವೊಂದು ಸಲಹೆಗಳು ಸಂಗಾತಿಗೆ ಇಷ್ಟವಾಗದೇ ಹೋಗಬಹುದು. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕುಂಭ: ಒಂದನ್ನು ಪಡೆಯಬೇಕಾದರೆ ಇನ್ನೊಂದನ್ನು ಕಳೆದುಕೊಳ್ಳಬೇಕು ಎನ್ನುವ ಪರಿಸ್ಥಿತಿ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ. ಮನೆಗೆ ಅತಿಥಿಗಳ ಆಗಮನವಾಗಲಿದೆ.

ಮೀನ: ಮನಸ್ಸು ಬಯಸ್ಸಿದ್ದನ್ನು ಮಾಡಲು ಹೋದಾಗ ಅಡ್ಡಿ ಆತಂಕಗಳು ಸಹಜ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ