Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 9 ಜನವರಿ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಆರಾಮದಾಯಕವೆನಿಸಲಿದೆ. ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮಕ್ಕಳ ಬೇಡಿಕೆ ಪೂರೈಸಲು ಖರ್ಚು ವೆಚ್ಚಗಳಾದೀತು. ತಾಳ್ಮೆ, ಸಂಯಮವಿರಲಿ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.

ವೃಷಭ: ಮಹಿಳೆಯರಿಗೆ ವಿಲಾಸೀ ಜೀವನದ ಯೋಗ.  ಅಲಂಕಾರಿಕ ವಸ್ತುಗಳ ಖರೀದಿ ಮಾಡಲಿದ್ದೀರಿ. ಮನೆಯವರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಬಳಸಿಕೊಳ್ಳಿ.

ಮಿಥುನ: ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ತಿಳಿದುಕೊಂಡು ಮುನ್ನಡೆಯಬೇಕು. ವೃತ್ತಿರಂಗದಲ್ಲಿ ನಿಮ್ಮನ್ನು ತುಳಿಯವ ವರ್ಗದವರ ಬಗ್ಗೆ ಎಚ್ಚರಿಕೆಯಿಂದಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ಕರ್ಕಟಕ: ಕೌಟುಂಬಿಕ ಜಂಜಾಟಗಳಿಂದ ಮನಸ್ಸು ಹೈರಾಣಾಗಲಿದೆ. ಕಾರ್ಮಿಕ ವರ್ಗದವರಿಗೆ ಉದ್ಯೋಗ ಕ್ಷೇಥ್ರದಲ್ಲಿ ಮುನ್ನಡೆಯ ಯೋಗವಿದೆ. ಯೋಗ್ಯ ವಯಸ್ಕರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ವ್ಯಾವಹಾರಿಕವಾಗಿ ನಿಮ್ಮ ಮುನ್ನಡೆಯನ್ನು ತಡೆಯಲು ಯಾರಿಂದಲೂ ಆಗದು. ನಿಮ್ಮ ಬಹುದಿನಗಳ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನ.

ಕನ್ಯಾ: ಬಂಧು ಮಿತ್ರರಿಂದ ಚಾಡಿ ಮಾತು ಕೇಳಿಬಂದೀತು. ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮುನ್ನಡೆದರೆ ಉತ್ತಮ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆ ಬೇಡ.

ತುಲಾ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಪ್ರೀತಿ ಪಾತ್ರರ ಹಾರೈಕೆ ನಿಮಗೆ ಶ್ರೀರಕ್ಷೆಯಾಗಲಿದೆ. ಧನ ಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕಾರ್ಯರಂಗದಲ್ಲಿ ವೃತ್ತಿ ಮಾತ್ಸರ್ಯ ಕಂಡುಬರಲಿದೆ. ನಿಮಗೆ ಸಂಬಂಧಪಡದ ವಿಚಾರದ ಬಗ್ಗೆ ತಲೆ ಕೊಡಲು ಹೋಗಬೇಡಿ. ಹೊಸ ಕೆಲಸಗಳಿಗೆ ಬಂಡವಾಳ ಹೂಡಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.

ಧನು: ನಿಮ್ಮ ಒಳ್ಳೆಯತನದ ದುರುಪಯೋಗ ಮಾಡುವವರಿತ್ತಾರೆ. ಎಚ್ಚರಿಕೆಯಿರಲಿ. ಮನೆಯವರೊಂದಿಗೆ ಕೆಲವೊಂದು ವಿಚಾರಗಳನ್ನು ಬಚ್ಚಿಡುವ ಅನಿವಾರ್ಯತೆ ಎದುರಾಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ.

ಮಕರ: ಮನಸ್ಸು ಇಲ್ಲದೇ ಇದ್ದರೂ ಪ್ರೀತಿ ಪಾತ್ರರಿಗಾಗಿ ಕೆಲವೊಂದು ಕೆಲಸ ಮಾಡಬೇಕಾಗಿ ಬರಲಿದೆ. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಬಯಸದೇ ಇದ್ದರೂ ಕೆಲವೊಂದು ವಸ್ತುಗಳು ತಾನಾಗಿಯೇ ನಿಮ್ಮ ಕೈ ಸೇರಲಿದೆ. ವಾಸಸ್ಥಳದಲ್ಲಿ ಬದಲಾವಣೆ ಕಂಡುಬರಬಹುದು. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ಸಂಗಾತಿಯ ಮನದಾಸೆ ಪೂರೈಸಲಿದ್ದೀರಿ.

ಮೀನ: ಮಾನಸಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಚಿಂತೆಗೀಡುಮಾಡಲಿದೆ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ತಪ್ಪದು. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ತಾಳ್ಮೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ