ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 13 ಜನವರಿ 2021 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮಹತ್ವದ ವಿಚಾರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ವೃಷಭ: ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಕಷ್ಟಗಳನ್ನು ಪರಿಹರಿಸಿಕೊಳ್ಳಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ಶುಭ ಮಂಗಲ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಹಿತ್ಯ, ಕಲೆ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಕಿರು ಸಂಚಾರ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಆದಾಯ ವೃದ್ಧಿಗೆ ನಾನಾ ದಾರಿ ಕಂಡುಕೊಳ್ಳಲಿದ್ದೀರಿ. ದೂರ ಸಂಚಾರ ಮಾಡಲಿದ್ದೀರಿ.

ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಮಾನಸಿಕವಾಗಿ ದೃಢ ಸಂಕಲ್ಪದಿಂದ ಹೊಸ ಕೆಲಸಗಳಿಗೆ ಕೈ ಹಾಕಿದರೆ ಯಶಸ್ವಿಯಾಗಲಿದ್ದೀರಿ. ನಿಮ್ಮ ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ಮುನ್ನಡೆಯಿರಿ. ತಾಳ್ಮೆ, ಸಂಯಮವಿರಲಿ.

ಕನ್ಯಾ: ವೃತ್ತಿರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿದೆ. ಹಾಗಿದ್ದರೂ ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ದೈಹಿಕವಾಗಿ ನಿಮ್ಮ ಅಸಮರ್ಥತೆಯನ್ನು ಮುಚ್ಚಿಟ್ಟುಕೊಂಡರೆ ಮುಂದೆ ಅನಾಹುತ ತಪ್ಪಿದ್ದಲ್ಲ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಮನಸ್ಸಿನ ದುಃಖ ಹಂಚಿಕೊಳ್ಳಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಯೋಜನೆ ಹಾಕಿದ ರೀತಿಯಲ್ಲೇ ಕೆಲಸ ಮಾಡಿದರೆ ಯಾವುದೇ ತೊಂದರೆಯಾಗದು. ಹಳೆಯ ವಸ್ತುಗಳನ್ನು ಕಾಪಾಡಿಕೊಳ್ಳುವ ಜವಾಬ್ಧಾರಿ ನಿಮ್ಮದಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ಧನು: ಕಾರ್ಯರಂಗದಲ್ಲಿ ನಿಮ್ಮ ಹಿತಶತ್ರುಗಳ ಹುನ್ನಾರಗಳು ಬೆಳಕಿಗೆ ಬರಲಿವೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮಹಿಳೆಯರಿಗೆ ಹೊಸ ವಸ್ತ್ರಾಭರಣಗಳ ಖರೀದಿ ಯೋಗವಿದೆ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ.

ಮಕರ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಮನಸ್ಸಿಗೆ ಹತ್ತಿರವಾದವರ ಜೊತೆ ಸಂಬಂಧ ಗಟ್ಟಿಗೊಳಿಸಲಿದ್ದೀರಿ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಸವಿಯುವ ಯೋಗವಿದೆ. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.

ಕುಂಭ: ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳಲಿದ್ಧೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ಮೀನ: ಬಹುದಿನಗಳ ನಿಮ್ಮ ಕನಸಿಗೆ ಜೀವ ತುಂಬಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಾಧ‍್ಯತೆಯಿದೆ, ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments