Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 14 ಜನವರಿ 2021 (09:11 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯದೊತ್ತಡ ಅಧಿಕವಾಗಲಿದ್ದು, ನಿಮ್ಮ ಕೋಪ ತಾಪಗಳೂ ಹೆಚ್ಚಾಗಲಿವೆ! ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಹೊಮದಾನಿಕೆ ನಡೆಸಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಾತು ಕೇಳುವವರಿಲ್ಲದೇ ಅಸಹನೆಯಾದೀತು. ತಾಳ್ಮೆ, ಸಂಯಮ ಅಗತ್ಯ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ಮಿಥುನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ನೀವಂದುಕೊಂಡಂತೇ ನಡೆಯಲಿದೆ. ವ್ಯಾವಹಾರಿಕವಾಗಿ ಲಾಭದಾಯಕ ದಿನಗಳು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಕರ್ಕಟಕ: ನ್ಯಾಯಾಲಯದ ಕಲಾಪಗಳಲ್ಲಿ ಮುನ್ನಡೆ ಒದಗಿಬರಲಿದೆ. ಸರಕಾರಿ ಲೆಕ್ಕಪತ್ರಗಳನ್ನು ಎಚ್ಚರಿಕೆಯಿಂದಿರಿಸಿಕೊಳ್ಳಿ. ದೈವಾನುಕೂಲದಿಂದ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಗೃಹ ನಿರ್ಮಾಣ ಅಥವಾ ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ಸ್ಥಗಿತಗೊಳ್ಳಲಿವೆ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚಗಳಾಗಲಿವೆ. ನಿಕಟವರ್ತಿಗಳಿಗೆ ಸಹಾಯ ಮಾಡಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ.

ಕನ್ಯಾ: ಮಹಿಳೆಯರು ನೆರೆಹೊರೆಯವರೊಂದಿಗೆ ಕಲಹವಾಗದಂತೆ ಎಚ್ಚರಿಕೆ ವಹಿಸಬೇಕು. ಮಾತಿನ ಮೇಲೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಹೊಸ ವಾತಾವರಣಕ್ಕೆ ಹೊಂದಿಕೊಳ‍್ಳುವುದು ಕಷ್ಟವಾಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದಾಯಾದಿಗಳೊಂದಿಗೆ ಕಲಹವಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಲಿದೆ. ನಿಮ್ಮ ವಿಶ್ವಾಸಕ್ಕೆ ದ್ರೋಹ ಮಾಡುವವರಿರುತ್ತಾರೆ. ಎಚ್ಚರಿಕೆಯಿಂದಿರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ರಾಜಕೀಯ ವರ್ಗದವರಿಗೆ ಮುನ್ನಡೆಯ ಯೋಗವಿದೆ. ಸರಕಾರಿ ನೌಕರರಿಗೆ ಕಾರ್ಯದೊತ್ತಡವಿರಲಿದೆ. ಅಧಿಕಾರಿ ವರ್ಗದವರೊಂದಿಗೆ ರಾಜೀ ಮನೋಭಾವ ಬೆಳೆಸಿಕೊಳ್ಳಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಕೆ ಮಾಡಲಿದ್ದೀರಿ. ನಿಮ್ಮ ಸಮಸ್ಯೆಗಳನ್ನು ಕ್ರಿಯಾತ್ಮಕವಾಗಿ ಪರಿಹರಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ಇಷ್ಟ ಭೋಜನ ಪ್ರಾಪ್ತಿಯಾಗಲಿದೆ.

ಕುಂಭ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿವೆ. ಪ್ರೇಮಿಗಳಿಗೆ ಮನೆಯವರನ್ನು ಒಪ್ಪಿಸುವ ಸವಾಲು ಎದುರಾಗಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮೀನ: ದೀರ್ಘಕಾಲದಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments