Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 15 ಜನವರಿ 2021 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವಿದ್ಯಾರ್ಥಿಗಳಿಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿದ್ದರೆ ಉತ್ತಮ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ದೂರ ಪ್ರಯಾಣ ಮಾಡಲಿದ್ದೀರಿ.

ವೃಷಭ: ಕೌಟುಂಬಿಕವಾಗಿ ಸಂತಸದ ದಿನ ನಿಮ್ಮದಾಗಲಿದೆ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ಕಿರು ಪ್ರವಾಸದಿಂದ ಮನೋಲ್ಲಾಸವಾಗಲಿದೆ. ಆದರೆ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಇದುವರೆಗೆ ಕಷ್ಟವೆಂದುಕೊಂಡಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ನಿಮ್ಮ ಮನಸ್ಸಿನ ದುಃಖವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕರ್ಕಟಕ: ವೃತ್ತಿರಂಗದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರಲಿದೆ. ಕೆಳ ಹಂತದ ನೌಕರರಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಿಂಹ: ನಿಮ್ಮ ವಾಹನ ಖರೀದಿ ಮಾಡುವ ಕನಸು ಸದ್ಯದಲ್ಲೇ ನನಸಾಗಲಿದೆ. ಫಲಾಪೇಕ್ಷೆಯಿಲ್ಲದೇ ಮಾಡುವ ಕೆಲಸದಿಂದ ಒಳಿತಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ಕನ್ಯಾ: ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ನಿಮಗೆ ತೊಂದರೆ ಮಾಡುವವರಿಂದ ಮುಕ್ತಿ ಸಿಗಲಿದೆ. ದೈವಾನುಕೂಲದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವುದು.

ತುಲಾ: ನಿಮ್ಮ ಸಾಂಸಾರಿಕ ವಿಚಾರಗಳಲ್ಲಿ ಬೇರೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ವ್ಯಾಪಾರಿಗಳು ವ್ಯವಹಾರದಲ್ಲಿ ಚೇತರಿಕೆ ಕಾಣಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ.

ವೃಶ್ಚಿಕ: ವ್ಯವಹಾರದಲ್ಲಿ ಶತ್ರುಪೀಡೆ ಕಂಡುಬಂದೀತು. ಅಂದುಕೊಂಡ ಕೆಲಸಗಳಿಗೆ ವಿಘ್ನ ಬಾಧೆಯಿದ್ದು, ನಿರಾಸೆಯಾದೀತು. ಆದರೆ ತಾಳ್ಮೆಗಡಬೇಡಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಇಷ್ಟಮಿತ್ರರ ಸಹಾಯ ಸಿಗಲಿದೆ.

ಧನು: ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರ ಭೇಟಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ಆದರೆ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಹಿರಿಯ ಜೀವಗಳಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕುಟುಂಬದವರ ಮಾತಿಗೆ ಬೆಲೆಕೊಟ್ಟು ನಿರ್ಧಾರಗಳನ್ನು ತೆಗೆದುಕೊಂಡರೆ ಉತ್ತಮ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಪ್ರೇಮಿಗಳಿಗೆ ಶುಭ ದಿನ.

ಕುಂಭ: ಕಾರ್ಯದೊತ್ತಡದಿಂದಾಗಿ ಅಧಿಕ ಓಡಾಟ ನಡೆಸಬೇಕಾಗಬಹುದು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಯವಂಚಕರ ಮಾತುಗಳಿಗೆ ಮರುಳಾಗಬೇಡಿ. ಕೃಷಿಕರಿಗೆ ವ್ಯವಹಾರದಲ್ಲಿ ತೊಡಕುಗಳಿದ್ದರೂ ಅಂತಿಮವಾಗಿ ಯಶಸ್ಸು ಸಿಗಲಿದೆ.

ಮೀನ: ಅಂದುಕೊಂಡಿದ್ದ ಶುಭ ಕಾರ್ಯ ಮುನ್ನಡೆಸಲು ವಿಘ್ನಗಳು ತೋರಿಬಂದೀತು. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments