Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 16 ಜನವರಿ 2021 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹೆಂಡತಿ ಮಕ್ಕಳಿಂದ ಸಂತಸದ ವಿಚಾರಗಳು ಕೇಳಿಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನೋಲ್ಲಾಸಕೊಡುವ ಕೆಲಸಗಳನ್ನು ಮಾಡಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಿಥುನ: ನಿಮ್ಮ ಬಗ್ಗೆ ಬೇರೆಯವರು ಏನು ಹೇಳುತ್ತಾರೋ ಎಂಬ ಅನಗತ್ಯ ಚಿಂತೆ ಮಾಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಬರುವ ಸವಾಲುಗಳನ್ನು ಪರಿಹರಿಸಲು ಸಂಗಾತಿಯ ನೆರವು ಪಡೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಧನವ್ಯಯ ಮಾಡಲಿದ್ದೀರಿ. ಜೀವನದಲ್ಲಿ ನಾನಾ ರೀತಿಯ ಏರುಪೇರುಗಳಿಗೆ ಮಾನಸಿಕವಾಗಿ ಸಿದ್ಧರಾಗಿ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ಸಿಂಹ: ಒಲ್ಲದ ವಿಚಾರಕ್ಕೆ ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅನಿವಾರ್ಯತೆ ಎದುರಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ್ನಗಳು ಎದುರಾಗಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದ್ದು, ಅನಗತ್ಯ ಚಿಂತೆ ಬೇಡ.

ಕನ್ಯಾ: ನಿಮ್ಮ ಸಮೀಪವರ್ತಿಗಳು ನಿಮ್ಮ ಬಗ್ಗೆ ಇದುವರೆಗೆ ಹೊಂದಿದ್ದ ಅಭಿಪ್ರಾಯ ಬದಲಿಸುವ ರೀತಿಯಲ್ಲಿ ನಡೆದುಕೊಳ್ಳಲಿದ್ದೀರಿ. ಯಾವುದೇ ನಿರ್ಧಾರಕ್ಕೆ ಮೊದಲು ಸಂಗಾತಿಯ ಜೊತೆಗೆ ಪರಾಮರ್ಶಿಸಿ ಮುನ್ನಡೆಯಿರಿ.

ತುಲಾ: ನಿಮ್ಮ ಬಹುದಿನಗಳ ಕನಸು ನನಸಾಗಿಸಲು ಹೊರಡಲಿದ್ದೀರಿ. ಕಳೆದು ಹೋದ ವಸ್ತುಗಳ ಮರಳಿ ಕೈ ಸೇರಲಿವೆ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುವುದು.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಪರಿಸರಕ್ಕೆ ವರ್ಗಾವಣೆಯಾಗುವ ಸಾಧ‍್ಯತೆಯಿದೆ. ಮೇಲಧಿಕಾರಿಗಳೊಂದಿಗೆ ಸಂಯಮದಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ. ನಿರುದ್ಯೋಗಿಗಳಿಗೆ ಆಕಸ್ಮಿಕ ಉದ್ಯೋಗಾವಕಾಶ ಸಿಗಲಿದೆ.

ಧನು: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ನಿಮ್ಮ ಒಂದು ಮಾತಿನಿಂದ ಆಪ್ತರ ಮನಸ್ಸಿಗೆ ನೋವುಂಟಾಗಬಹುದು. ಅನಗತ್ಯ ವಾದ ವಿವಾದ ಬೇಡ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡಿ.

ಮಕರ: ಕೌಟುಂಬಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಬಯಸದೇ ಕೆಲವೊಂದು ಅವಕಾಶಗಳು ತಾನಾಗಿಯೇ ಕೈಸೇರಲಿದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಇಷ್ಟವಸ್ತುಗಳ ಖರೀದಿ ಮಾಡಲಿದ್ದೀರಿ.

ಕುಂಭ: ಕ್ರಯ-ವಿಕ್ರಯ ವ್ಯವಹಾರದಲ್ಲಿ ನಷ್ಟವಾದೀತು. ಹೂಡಿಕೆ ಮಾಡುವ ಮೊದಲು ಯೋಚಿಸಿ ಹೆಜ್ಜೆಯಿಡಿ. ಸ್ವಾಭಿಮಾನಕ್ಕೆ ಧಕ್ಕೆ ತರುವವರಿಂದ ದೂರವಿರುವುದೇ ಉತ್ತಮ. ಕೆಳಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿಯಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ದೂರ ಸಂಚಾರದಲ್ಲಿ ಅಪಘಾತದ ಭಯ ಕಂಡುಬರಬಹುದು. ಮನೆಯಿಂದ ಹೊರಡುವ ಮೊದಲು ಕುಲದೇವರ ಪ್ರಾರ್ಥನೆ ಮಾಡಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments